ಕರ್ನಾಟಕದಲ್ಲಿ ಗೆಲ್ಲುತ್ತಿದ್ದಂತೆ ಡಿಕೆ ಶಿವಕುಮಾರ್‌ಗೆ ಹೊಸ ಟಾಸ್ಕ್‌! ಸಕ್ಸಸ್‌ ಆಗ್ತಾರಾ ಕನಕಪುರ ಬಂಡೆ?

masthmagaa.com:

ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಭರ್ಜರಿ ಬಹುಮತದೊಂದಿಗೆ ದಿಗ್ವಿಜಯ ಸಾಧಿಸಿದ ಬೆನ್ನಲ್ಲೇ, ಇದೇ ಫಲಿತಾಂಶವನ್ನು ಈ ವರ್ಷದ ಅಕ್ಟೋಬರ್‌ನಲ್ಲಿ ನಡೆಯುವ ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲೂ ಪುನರಾವರ್ತಿಸಲು ಕಾಂಗ್ರೆಸ್‌ ಯೋಜನೆ ಹಾಕಿಕೊಂಡಿದೆ. ಅದಕ್ಕಾಗಿ ಡಿಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ಅವರಿಗೆ ಕಾಂಗ್ರೆಸ್‌ ಹೈಕಮಾಂಡ್‌, ತೆಲಂಗಾಣ ವಿಧಾನಸಭಾ ಚುನಾವಣೆಯ ಮೇಲ್ವಿಚಾರಣೆ ಮತ್ತು ಕಾರ್ಯತಂತ್ರದ ಮೇಲುಸ್ತುವಾರಿಯನ್ನ ವಹಿಸಿದೆ. ಡಿಕೆಶಿವಕುಮಾರ್‌ ಅವರ ಸಂಘಟನೆ ಕೌಶಲ್ಯ, ಕ್ರಿಯಾಶೀಲ ವ್ಯಕ್ತಿತ್ವ, ಚುನಾವಣಾ ತಂತ್ರಗಾರಿಕೆಯನ್ನು ತೆಲಂಗಾಣದಲ್ಲಿ ಬಳಸಿಕೊಳ್ಳಲು ಕಾಂಗ್ರೆಸ್‌ ವರಿಷ್ಠರು ಮುಂದಾಗಿದ್ದಾರೆ ಎನ್ನಲಾಗಿದೆ. ಈಗಾಗಲೇ ಡಿಕೆಶಿ ತೆಲಂಗಾಣ ಪ್ರದೇಶ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ರೇವಂತ್‌ ರೆಡ್ಡಿ ಸೇರಿ ಪೊಂಗುಲೇಟಿ ಶ್ರೀನಿವಾಸ ರೆಡ್ಡಿ, ಜೂಪಲ್ಲಿ ಕೃಷ್ಣರಾವ್‌ ಜೊತೆ ಚರ್ಚೆ ನಡೆಸಿದ್ದಾರೆ.

-masthmagaa.com

Contact Us for Advertisement

Leave a Reply