masthmagaa.com:
ಕೇಂದ್ರದಿಂದ ಕರ್ನಾಟಕ ರಾಜ್ಯಕ್ಕೆ ಸರಿಯಾದ ಅನುದಾನದ ನೀಡಿಲ್ಲ ಅಂತ ಸಿದ್ದರಾಮಯ್ಯ ಸರ್ಕಾರ ಸುಳ್ಳು ಆರೋಪ ಮಾಡ್ತಿದೆ ಅಂತ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಕೇಂದ್ರದಿಂದ ಅನುದಾನ ಸಿಗಲ್ಲ ಅಂತೇಳಿ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ ಮೊರೆ ಹೋದ ಬೆನ್ನಲ್ಲೆ ವಿತ್ತ ಸಚಿವರು ಈ ಪ್ರತಿಕ್ರಿಯೆ ನೀಡಿದ್ದಾರೆ. ಈ ವೇಳೆ ಮಾತನಾಡಿದ ಅವ್ರು, ʻರಾಜ್ಯಕ್ಕೆ ಆಯಾ ಕಾಲದಲ್ಲಿ ನೀಡ್ಬೇಕಾದ ಅನುದಾನವನ್ನ ನಮ್ಮ ಸರ್ಕಾರ ನೀಡಿದೆ. ಅದ್ರಲ್ಲಿ ನಯಾ ಪೈಸೆಯನ್ನ ಕೂಡ ಕಡಿತಗೊಳಿಸಿಲ್ಲ. ಅಲ್ದೇ ಯುಪಿಎ ಸರ್ಕಾರಕ್ಕೆ ಹೋಲಿಸಿದ್ರೆ, ನಮ್ಮ NDA ಆಡಳಿತದಲ್ಲಿ ಎಲ್ಲಾ ರಾಜ್ಯಗಳಿಗೆ ನೀಡಲಾಗೊ ತೆರಿಗೆ ಪಾಲು ಹಾಗೂ ಅನುದಾನವನ್ನ ಹೆಚ್ಚಳ ಮಾಡಲಾಗಿದೆ. ಆದ್ರೆ ರಾಜ್ಯ ಸರ್ಕಾರ ಮಾತ್ರ 5,495 ಕೋಟಿ ರೂಪಾಯಿ ವಿಶೇಷ ಅನುದಾನ ನೀಡಿಲ್ಲ ಅಂತ ಆರೋಪಿಸಿದೆ. ಈ ಬಗ್ಗೆ ರಾಜ್ಯಕ್ಕೆ ಅನುದಾನ ನೀಡುವಂತೆ ಹಣಕಾಸು ಆಯೋಗ ಯಾವುದೇ ಶಿಫಾರಸ್ಸು ಮಾಡಿಲ್ಲ. ಹೀಗಾಗಿ ಆ ಅನುದಾನ ನೀಡಿಲ್ಲʼ ಅಂತ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.
-masthmagaa.com
Contact Us for Advertisement