masthmagaa.com:
ಸತತ 4ನೇ ಬಾರಿ ಮತ್ತು ಒಟ್ಟಾರೆಯಾಗಿ 7ನೇ ಬಾರಿ ಬಿಹಾರ ಸಿಎಂ ಆಗಿ ಇವತ್ತು ಜೆಡಿಯು ಮುಖ್ಯಸ್ಥ ನಿತೀಶ್ ಕುಮಾರ್ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಅವರ ಜೊತೆಗೆ 14 ಸಚಿವರು ಕೂಡ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಅದರಲ್ಲಿ ಬಿಜೆಪಿ ಇಬ್ಬರು ಉಪಮುಖ್ಯಮಂತ್ರಿಗಳು ಸೇರಿದ್ದಾರೆ. ತಾರ್ಕಿಶೋರ್ ಪ್ರಸಾದ್ ಹಾಗೂ ರೇಣು ದೇವಿ. ಪ್ರಮಾಣವಚನ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಸೇರಿದಂತೆ ಹಲವರು ಭಾಗವಹಿಸಲಿದ್ದಾರೆ. ಆದ್ರೆ ಕಾರ್ಯಕ್ರಮವನ್ನು ಬಹಿಷ್ಕರಿಸಲು ತೇಜಸ್ವಿ ಯಾದವ್ ಅವರ ಆರ್ಜೆಡಿ ಪಕ್ಷ ನಿರ್ಧರಿಸಿದೆ. ಈ ಸಂಬಂಧ ಟ್ವೀಟ್ ಮಾಡಿರುವ ಆರ್ಜೆಡಿ, ‘ಬಿಹಾರ ಜನಾದೇಶವು ಎನ್ಡಿಎ ವಿರುದ್ಧವಾಗಿದೆ. ಹೀಗಾಗಿ ಪ್ರಮಾಣವಚನ ಕಾರ್ಯಕ್ರಮವನ್ನ ನಮ್ಮ ಪಕ್ಷ ಬಹಿಷ್ಕರಿಸುತ್ತೆ’ ಅಂತ ಹೇಳಿದೆ.
राजद शपथ ग्रहण का बायकॉट करती है। बदलाव का जनादेश NDA के विरुद्ध है। जनादेश को 'शासनादेश' से बदल दिया गया। बिहार के बेरोजगारों,किसानो,संविदाकर्मियों, नियोजित शिक्षकों से पूछे कि उनपर क्या गुजर रही है।NDA के फर्ज़ीवाड़े से जनता आक्रोशित है। हम जनप्रतिनिधि है और जनता के साथ खड़े है
— Rashtriya Janata Dal (@RJDforIndia) November 16, 2020
-masthmagaa.com
Contact Us for Advertisement