masthmagaa.com:
‘ಬಿಹಾರದಲ್ಲಿ ಎಲ್ಜೆಪಿ (ಲೋಕ ಜನಶಕ್ತಿ ಪಾರ್ಟಿ) ಅಧಿಕಾರಕ್ಕೆ ಬಂದರೆ ನಿತೀಶ್ ಕುಮಾರ್ ಕಂಬಿ ಹಿಂದೆ ಹೋಗ್ತಾರೆ’ ಅಂತ ಎಲ್ಜೆಪಿ ನಾಯಕ ಚಿರಾಗ್ ಪಾಸ್ವಾನ್ ಹೇಳಿದ್ದಾರೆ. ಬಿಹಾರ ವಿಧಾನಸಭೆಗೆ ಕೆಲವೇ ದಿನಗಳು ಬಾಕಿ ಇರುವಾಗಲೇ ಚಿರಾಗ್ ಪಾಸ್ವಾನ್ ಈ ರೀತಿ ಹೇಳಿರೋದು ಸಾಕಷ್ಟು ಮಹತ್ವ ಪಡೆದುಕೊಂಡಿದೆ. ಬಹುಕೋಟಿ ಮೇವು ಹಗರಣದಲ್ಲಿ ಸಿಕ್ಕಾಕ್ಕೊಂಡಿರುವ ಬಿಹಾರದ ಮಾಜಿ ಸಿಎಂ ಲಾಲು ಪ್ರಸಾದ್ ಯಾದವ್ ಈಗಾಗಲೇ ಜೈಲಿನಲ್ಲಿ ಕಂಬಿ ಎಣಿಸುತ್ತಿದ್ದಾರೆ.
ಚುನಾವಣಾ ಪ್ರಚಾರದ ವೇಳೆ ಮಾತನಾಡಿದ ಚಿರಾಗ್ ಪಾಸ್ವಾನ್, ‘ಎಲ್ಜೆಪಿ ಅಧಿಕಾರಕ್ಕೆ ಬಂದರೆ ನಿಶ್ಚಯ್ ಯೋಜನೆಯಲ್ಲಿ ನಡೆದ ಭ್ರಷ್ಟಾಚಾರ ಬಗ್ಗೆ ತನಿಖೆ ನಡೆಸುತ್ತೇವೆ. ಇದರಲ್ಲಿ ಸಿಎಂ ಆಗಲೀ ಅಥವಾ ಯಾರಾದ್ರೂ ಅಧಿಕಾರಿಯಾಗಲೀ ಸಿಕ್ಕಿಬಿದ್ದರೆ ಅವರನ್ನು ಜೈಲಿಗೆ ಅಟ್ಟುತ್ತೇವೆ. ಬಿಹಾರದಲ್ಲಿ ಮದ್ಯ ಮಾರಾಟ ನಿಷೇಧ ವಿಫಲವಾಗಿದೆ. ಅಕ್ರಮ ಮದ್ಯ ದಂಧೆ ವ್ಯಾಪಕವಾಗಿ ನಡೆಯುತ್ತಿದೆ. ಇದರಿಂದ ನಿತೀಶ್ ಕುಮಾರ್ಗೆ ಕಿಕ್ಬ್ಯಾಕ್ ಸಿಗುತ್ತಿದೆ. ಹೀಗಾಗಿ ಈ ಬಾರಿ ನಿತೀಶ್ಯೇತರ ಸರ್ಕಾರ ಅಧಿಕಾರಕ್ಕೆ ಬರಲು ಬಿಜೆಪಿ ಬೆಂಬಲಿಗರು ಎಲ್ಜೆಪಿಗೆ ವೋಟ್ ಹಾಕಿ ಅಂತ ಕೇಳಿಕೊಂಡರು.
-masthmagaa.com
Contact Us for Advertisement