masthmagaa.com:
ಕುಸ್ತಿ ಫೆಡರೇಶನ್ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧದ ಹೋರಾಟ ಇನ್ಮುಂದೆ ರಸ್ತೆಗಳ ಮೇಲಲ್ಲ, ನ್ಯಾಯಾಲಯದಲ್ಲಿ ನಡೆಸುತ್ತೇವೆ ಅಂತ ಕುಸ್ತಿಪಟುಗಳು ಎಚ್ಚರಿಕೆ ನೀಡಿದ್ದಾರೆ. ಸಿಂಗ್ ವಿರುದ್ಧ ಚಾರ್ಜ್ಶೀಟ್ ಸಲ್ಲಿಸುವ ಭರವಸೆಯನ್ನ ಸರ್ಕಾರ ಈಡೇರಿಸಿದೆ. ಹೀಗಾಗಿ ಪ್ರತಿಭಟನೆಯನ್ನ ಹಿಂಪಡೆದಿದ್ದೇವೆ. ಆದರೆ, ನಮಗೆ ನ್ಯಾಯ ಸಿಗೋವರೆಗೂ ಹೋರಾಟ ಮುಂದುವರೆಯಲಿದೆ. ಆದರೆ, ಹೋರಾಟ ರಸ್ತೆಗಳ ಮೇಲಲ್ಲ, ಬದಲಿಗೆ ನ್ಯಾಯಾಲಯದಲ್ಲಿ ಮುಂದುವರೆಯಲಿದೆ ಅಂತ ಕುಸ್ತಿಪಟುಗಳಾದ ವಿನೇಶ್ ಫೋಗಟ್, ಸಾಕ್ಷಿ ಮಲಿಕ್ ಮತ್ತು ಬಜರಂಗ್ ಪುನಿಯಾ ಹೇಳಿದ್ದಾರೆ.
-masthmagaa.com
Contact Us for Advertisement