masthmagaa.com:
ರಾಜ್ಯದಲ್ಲಿ ಇನ್ನು 5 ವರ್ಷಗಳ ತನಕ ಸಿಎಂ ಬದಲಾವಣೆ ಇಲ್ಲ ಅಂತ ಸಚಿವ ಎಂಬಿ ಪಾಟೀಲ್ ಹೇಳಿದ್ದಕ್ಕೆ, ಇದೆಲ್ಲ ಬೇಡ ಅಂತ ಡಿಕೆ ಸುರೇಶ್ ಎಚ್ಚರಿಕೆ ಕೊಟ್ಟಿದ್ರು. ಈ ವಿಷಯ ಬಹಳ ಚರ್ಚೆಯಾಗಿತ್ತು. ಇದೀಗ ಇದಕ್ಕೆ ಪ್ರತಿಕ್ರಿಯಿಸಿರೋ, ಎಂಬಿ ಪಾಟೀಲ್, ನನಗೆ ಯಾರು ವಾರ್ನ್ ಮಾಡಿಲ್ಲ, ನಾನು ಯಾರಿಗೂ ವಾರ್ನ್ ಮಾಡಿಲ್ಲ. ವಾರ್ನ್ ಮಾಡಿಸಿಕೊಳ್ಳುವಷ್ಟು ವೀಕ್ ಇಲ್ಲ ಅಂತ ಹೇಳಿದ್ದಾರೆ. ನಾನು 6 ಬಾರಿ ಶಾಸಕನಾಗಿದ್ದೇನೆ, ಗೃಹ ಸಚಿವನಾಗಿ ಕೆಲಸ ಮಾಡಿದ್ದೇನೆ. ನಮ್ಮ ತಂದೆ-ತಾಯಿನೇ ಒಂದೂ ದಿನ ನನಗೆ ವಾರ್ನ್ ಮಾಡಿಲ್ಲ. ವಾರ್ನಿಂಗ್ ಅನ್ನೊ ಪದ ನಮ್ಮ ಡಿಕ್ಷನರಿಯಲ್ಲೇ ಇಲ್ಲ. ವಾರ್ನಿಂಗ್ ಕೊಡ್ತೇವೆ ವಿನಃ ನಾವು ತೆಗೆದುಕೊಳ್ಳಲ್ಲ. ಎಂ.ಬಿ.ಪಾಟೀಲ್ ಯಾರಿಗೂ ಹೆದರಲ್ಲ, ನಾನು ವಿಜಯಪುರದವನು ಎಂದಿದ್ದಾರೆ. ಜೊತೆಗೆ ವಿಧಾನಸೌಧದಲ್ಲಿ ಬಹಳ ಪ್ರೀತಿಯಿಂದ ಎಂ.ಬಿ.ಪಾಟೀಲ್ರೇ ಅಂತಾ ಸಂಸದ ಡಿ.ಕೆ.ಸುರೇಶ್ ಕರೆದಿದ್ದು ನಿಜ. ಅವರ ಮತ್ತು ನಮ್ಮ ಸಂಬಂಧ ತುಂಬಾ ಚೆನ್ನಾಗಿದೆ. ಕಚೇರಿಯೊಳಗೆ ಬನ್ನಿ ಮಾತಾಡೋಣ ಅಂತ ಹೇಳಿ ಹೋದೆ ಅಷ್ಟೇ ಅಂತ ಸ್ಪಷ್ಟನೆ ನೀಡಿದ್ದಾರೆ.
-masthmagaa.com
Contact Us for Advertisement