masthmagaa.com:
ಮುಂಬರುವ ಲೋಕಸಭೆ ಚುನಾವಣೆ ಹಿನ್ನಲೆಯಲ್ಲಿ ಬಿಜೆಪಿ- ಜೆಡಿಎಸ್ ಮೈತ್ರಿ ಮಾಡಿಕೊಂಡ ಬಳಿಕ ಎರಡೂ ಪಕ್ಷಗಳ ಕೆಲವು ನಾಯಕರು ಅಸಮಾಧಾನ ಹೊರಹಾಕಿದ್ರು. ಅದ್ರಲ್ಲೂ ಜೆಡಿಎಸ್ನ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಮೈತ್ರಿ ಕುರಿತು ಬೇಸರ ವ್ಯಕ್ತಪಡಿಸಿದ್ದು, ತಮ್ಮ ಮುಂದಿನ ನಡೆ ಬಗ್ಗೆ ತಿಳಿಸೋದಾಗಿ ಹೇಳಿದ್ದರು. ಇದೀಗ ಬಿಜೆಪಿ ಜೊತೆ ಮೈತ್ರಿಕೊಳ್ಳಲು ಇಬ್ರಾಹಿಂ ಅವರಿಂದ ಯಾವುದೇ ವಿರೋಧವಿಲ್ಲ. ಹಾಗೂ ಪಕ್ಷವನ್ನೂ ಬಿಡೋದಿಲ್ಲ ಅಂತ ಜೆಡಿಎಸ್ ಶಾಸಕ ಜಿ.ಟಿ ದೇವೇಗೌಡ ಹೇಳಿದ್ದಾರೆ. ಜೊತೆಗೆ ಜೆಡಿಎಸ್ ವರಿಷ್ಠ ದೇವೇಗೌಡರ ಜೊತೆ ಇಬ್ರಾಹಿಂ ಮಾತುಕತೆ ನಡೆಸಿದ್ದು, ಹೇಗೆ ಒಟ್ಟಾಗಿ ಕೆಲಸ ಮಾಡಬೇಕು ಅಂತ ಇಬ್ರಾಹಿಂ ಸಲಹೆ ನೀಡಿದ್ದಾರೆ ಅಂತ ಜಿಟಿಡಿ ಹೇಳಿದ್ದಾರೆ.
-masthmagaa.com
Contact Us for Advertisement