masthmagaa.com:
ಕೊರೋನಾ ಸೋಂಕಿನ ಎರಡನೇ ಅಲೆ ವೇಳೆ ಆಕ್ಸಿಜನ್ ಕೊರತೆಯಿಂದ ದೇಶದಲ್ಲಿ ಒಂದೇ ಒಂದು ಸಾವು ಸಂಭವಿಸಿಲ್ಲ ಅಂತ ಕೇಂದ್ರ ಆರೋಗ್ಯ ಸಚಿವ ನಿನ್ನೆ ಸಂಸತ್ನಲ್ಲಿ ಹೇಳಿದ್ದರು. ಇದರಿಂದ ಕೆರಳಿ ಕೆಂಡವಾಗಿರೋ ವಿಪಕ್ಷಗಳು, ಕೇಂದ್ರ ಸರ್ಕಾರ ಸುಳ್ಳು ಹೇಳ್ತಿದೆ ಅಂತ ಕಿಡಿಕಾರಿವೆ. ಶಿವಸೇನೆ ನಾಯಕ ಸಂಜಯ್ ರಾವತ್ ಮಾತನಾಡಿ, ಸರ್ಕಾರದ ಈ ಮಾತನ್ನ ಆಕ್ಸಿಜನ್ ಕೊರತೆಯಿಂದ ಪ್ರಾಣ ಕಳೆದುಕೊಂಡವರ ಕುಟುಂಬದವರು ಏನಾದ್ರೂ ಕೇಳಿಸಿಕೊಂಡ್ರೆ ಏನಾಗಬಹುದು ಅಂತ ಪ್ರಶ್ನೆ ಮಾಡಿದ್ದಾರೆ. ಜೊತೆಗೆ ಕೇಂದ್ರ ಸರ್ಕಾರದ ಮೇಲೆ ಒಂದು ಕೇಸ್ ಹಾಕ್ಬೇಕು ಅಂತ ಆಗ್ರಹಿಸಿದ್ದಾರೆ. ಇನ್ನು ಕಾಂಗ್ರೆಸ್ ನಾಯಕ ಕೆಸಿ ವೇಣುಗೋಪಾಲ್ ಮಾತನಾಡಿ, ಆಕ್ಸಿಜನ್ ಕೊರತೆಯಿಂದ ಕರ್ನಾಟದಲ್ಲಿ ಮೂರು ಜನ ಪ್ರಾಣ ಕಳೆದುಕೊಂಡಿದ್ದಾರೆ ಅಂತ ಅಲ್ಲಿನ ಆರೋಗ್ಯ ಸಚಿವರೇ ಒಪ್ಪಿಕೊಂಡಿದ್ದಾರೆ. ಹರಿಯಾಣ, ಆಂಧ್ರಪ್ರದೇಶ ಸರ್ಕಾರಗಳು ಕೂಡ ಒಪ್ಪಿಕೊಂಡಿವೆ ಅಂತ ಹೇಳಿದ್ದಾರೆ. ಇನ್ನು ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಮಾತನಾಡಿ, ಆಕ್ಸಿಜನ್ ಕೊರತೆ ಇಲ್ಲದಿದ್ರೆ ರಾಜ್ಯ ಸರ್ಕಾರಗಳು ಯಾಕೆ ಕೇಂದ್ರ ಸರ್ಕಾರದ ವಿರುದ್ಧ ಸುಪ್ರೀಂಕೋರ್ಟ್ಗೆ ಹೋಗ್ತಿದ್ವು ಅಂತ ಪ್ರಶ್ನೆ ಮಾಡಿದ್ದಾರೆ.
-masthmagaa.com
Contact Us for Advertisement