masthmagaa.com:
ಬೆಂಗಳೂರು: ಕೊರೋನಾ ವೈರಸ್ ಇಡೀ ದೇಶದಾದ್ಯಂತ ಆತಂಕ ಮೂಡಿಸಿದ್ದು, ಭಾರತವನ್ನು ಲಾಕ್ಡೌನ್ ಮಾಡಲಾಗಿದೆ. ಇಂತಹ ಸಂದರ್ಭದಲ್ಲಿ ಮುಸ್ಲಿಮರ ವಿರುದ್ಧ ವೈರಸ್ ಹರಡುತ್ತಿರುವ ಆರೋಪ ಮಾಡಿದ್ರೆ ಅಂಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತೆ ಅಂತ ಸಿಎಂ ಯಡಿಯೂರಪ್ಪ ಹೇಳಿದ್ದಾರೆ. ಖಾಸಗಿ ವಾಹಿನಿಗಳ ಸಂದರ್ಶನದಲ್ಲಿ ಮಾತನಾಡಿದ ಅವರು, ವೈದ್ಯರ ಮೇಲೆ ಹಲ್ಲೆ ನಡೆಸಿದ ಪ್ರಕರಣದಲ್ಲಿ ಆರೋಪಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗಿದೆ. ಆದ್ರೆ ಕೆಲವೆಡೆ ನಡೆದಿರೋ ಇಂತಹ ಘಟನೆಗಳಿಂದ ಇಡೀ ಸಮುದಾಯವನ್ನೇ ಹೊಣೆಗಾರರನ್ನಾಗಿ ಮಾಡೋದು..ಅವರ ಬಗ್ಗೆ ಹಗುರವಾಗಿ ಮಾತನಾಡೋದು ಸರಿಯಲ್ಲ.. ಅಂಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತೆ ಅಂತ ಎಚ್ಚರಿಸಿದ್ದಾರೆ.
-masthmagaa.com
Contact Us for Advertisement