‘ಮೋದಿ ಮನೆಗೆ ಹೋದ ಮೇಲೆ ಅಂಬಾನಿ, ಅದಾನಿಗೆ ಕೆಲಸ ಮಾಡ್ತಾರೆ’

masthmagaa.com:

‘ಯೋದರು, ರೈತರು, ಕಾರ್ಮಿಕರು ಮತ್ತು ವ್ಯಾಪಾರಿಗಳಿಗೆ ತಲೆ ಬಾಗುತ್ತೇನೆ ಅಂತ ಸಾರ್ವಜನಿಕವಾಗಿ ಹೇಳುವ ಪ್ರಧಾನಿ ಮೋದಿ, ಮನೆ ತಲುಪಿದ ಬಳಿಕ ಅಂಬಾನಿ ಮತ್ತು ಅದಾನಿಗಾಗಿ ಕೆಲಸ ಮಾಡುತ್ತಾರೆ. ಹುತಾತ್ಮ ಯೋಧರಿಗೆ ತಲೆ ಬಾಗುತ್ತೇನೆ ಅನ್ನೋರು ಚೀನಾ ನಮ್ಮ ಭೂಪ್ರದೇಶವನ್ನು ಆಕ್ರಮಿಸಿಕೊಂಡ ಬಗ್ಗೆ ಮಾತಾಡ್ತಾನೇ ಇಲ್ಲ’ ಅಂತ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರಧಾನಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಬಿಹಾರದಲ್ಲಿ ಆರ್​ಜೆಡಿ ನಾಯಕ ತೇಜಸ್ವಿ ಯಾದವ್​ ಜೊತೆ ಜಂಟಿ ರ್‍ಯಾಲಿಯಲ್ಲಿ ಭಾಗವಹಿಸಿ ಈ ರೀತಿ ಹೇಳಿದ್ದಾರೆ. ಇದಕ್ಕೂ ಮೊದಲು ಬಿಹಾರದ ಸಸಾರಾಮ್​ನಲ್ಲಿ ಮಾತನಾಡಿದ್ದ ಪ್ರಧಾನಿ ಮೋದಿ, ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ ಯೋಧರಿಗೆ ತಲೆ ಬಾಗುತ್ತೇನೆ ಅಂತ ಹೇಳಿದ್ದರು. ಅದಕ್ಕೆ ರಾಹುಲ್ ಗಾಂಧಿ ತಿರುಗೇಟು ಕೊಟ್ಟಿದ್ದಾರೆ.

ಹಾಗೇ ಬಿಹಾರದಲ್ಲಿ ಉದ್ಯೋಗ ಸೃಷ್ಟಿ ಬಗ್ಗೆ ಮಾತನಾಡಿದ ಪ್ರಧಾನಿಗೆ ಕೌಂಟರ್ ಕೊಟ್ಟಿರುವ ರಾಹುಲ್ ಗಾಂಧಿ, ‘ಕಳೆದ ಚುನಾವಣೆಯಲ್ಲಿ 2 ಕೋಟಿ ಉದ್ಯೋಗ ಸೃಷ್ಟಿ ಮಾಡೋದಾಗಿ ಹೇಳಿದ್ದರು. ಆದ್ರೆ ಒಬ್ಬರಿಗೂ ಕೆಲಸ ಸಿಕ್ಕಿಲ್ಲ. ಬಿಹಾರದ ಜನತೆಗೆ ಸುಳ್ಳು ಹೇಳೋದನ್ನು ನಿಲ್ಲಿಸಿ. ರೈತರ ಮೇಲೆ ದಾಳಿ ನಡೆಸಲು ಕೇಂದ್ರ ಸರ್ಕಾರ 3 ಕೃಷಿ ಕಾಯ್ದೆಗಳನ್ನು ಜಾರಿಗೆ ತಂದಿದೆ. ಮೊದಲು ಬಿಹಾರದಲ್ಲಿ ಮಂಡಿಗಳು ಮತ್ತು ಎಂಎಸ್​ಪಿಯನ್ನು ಬಂದ್ ಮಾಡಿದ್ರು. ಈಗ ಇಡೀ ದೇಶದಲ್ಲಿ ಬಂದ್ ಮಾಡಲು ಹೊರಟಿದ್ದಾರೆ. ಈ ಮೂಲಕ ಪ್ರಧಾನಿ ಮೋದಿ ಲಕ್ಷಾಂತರ ಜನರನ್ನು ನಿರುದ್ಯೋಗಿಗಳಾಗಿ ಮಾಡಲು ಹೊರಟಿದ್ದಾರೆ. ಅವರು ಎಲ್ಲೆಲ್ಲಿ ಹೋಗ್ತಾರೋ ಅಲ್ಲೆಲ್ಲಾ ಸುಳ್ಳು ಹೇಳ್ತಾರೆ’ ಅಂತ ವಾಗ್ದಾಳಿ ನಡೆಸಿದ್ದಾರೆ.

-masthmagaa.com

Contact Us for Advertisement

Leave a Reply