masthmagaa.com:

ಮರಾಠ ಪ್ರಾಧಿಕಾರ ವಿರೋಧಿಸಿ ನಾಳೆ ಕರ್ನಾಟಕ ಬಂದ್​ಗೆ ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಬೆನ್ನಲ್ಲೇ, ಬಂದ್​ನಿಂದ ಆಗುವ ಆರ್ಥಿಕ ನಷ್ಟಕ್ಕೆ ಆಯೋಜಕರೇ ಹೊಣೆ ಅಂತ ಹೈಕೋರ್ಟ್ ವಿಭಾಗೀಯ ಪೀಠ​ ಎಚ್ಚರಿಕೆ ನೀಡಿದೆ. ಸುಪ್ರೀಂಕೋರ್ಟ್​ ಆದೇಶವನ್ನ ಉಲ್ಲೇಖಿಸಿ ಹೀಗೆ ಹೇಳಿದೆ. ಜೊತೆಗೆ ಬಂದ್ ವೇಳೆ ಕೊರೋನಾ ಮಾರ್ಗಸೂಚಿ ಉಲ್ಲಂಘನೆಯಾಗದಂತೆ ಪೊಲೀಸರು ಮತ್ತು ಸರ್ಕಾರ ನೋಡಿಕೊಳ್ಳಬೇಕು. ನಿಯಮ ಉಲ್ಲಂಘಿಸುವವರಿಗೆ ದಂಡ ವಿಧಿಸಬೇಕು ಅಂತ ಸೂಚಿಸಿದೆ. ಅಲ್ಲದೆ ವಾಟಾಳ್ ಪಕ್ಷ ಸೇರಿದಂತೆ ಇತರ ರಾಜಕೀಯ ಪಕ್ಷಗಳಿಗೆ ಈ ಸಂಬಂಧ ಡಿಸೆಂಬರ್ 17ರೊಳಗೆ ಪ್ರತಿಕ್ರಿಯೆ ನೀಡುವಂತೆ ನೋಟಿಸ್ ನೀಡಲಾಗಿದೆ. ಲೆಟ್ಸ್​ ಕಿಟ್ ಫೌಂಡೇಶನ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಈ ರೀತಿ ಹೇಳಿದೆ.

-masthmagaa.com

Contact Us for Advertisement

Leave a Reply