masthmagaa.com:
ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜಗದೀಶ್ ಶೆಟ್ಟರ್ ಪರ ಪ್ರಚಾರ ಮಾಡಿದ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ವಿರುದ್ಧ AIMIMನ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ. ಕಾಂಗ್ರೆಸ್ ಸಿದ್ಧಾಂತದ ಬಗ್ಗೆ ಪ್ರಶ್ನೆ ಎತ್ತಿರೊ ಓವೈಸಿ, ರಾಷ್ಟ್ರೀಯ ಸ್ವಯಂ ಸೇವಕ ಸಂಘ (RSS) ಮೂಲದ ಅಭ್ಯರ್ಥಿಯೊಬ್ರ ಪರ ಸೋನಿಯಾ ಗಾಂಧಿ ಪ್ರಚಾರ ಮಾಡ್ತಾರೆ ಅಂತ ನಾನು ಎಂದಿಗೂ ಊಹಿಸರಿಲಿಲ್ಲ ಅಂತ ಹೇಳಿದ್ದಾರೆ. ಜೊತೆಗೆ ಇದಾ ನಿಮ್ಮ ಜಾತ್ಯಾತೀತತೆ? ಮೋದಿ ವಿರುದ್ಧ ಹೋರಾಡುವುದು ಹೀಗಾ? ಅಂತ ಪ್ರಶ್ನಿಸಿದ್ದಾರೆ. ಅಲ್ದೇ ಇದೊಂದು ನಾಚಿಕೆಗೇಡಿನ ಸಂಗತಿ, ಕಾಂಗ್ರೆಸ್ ಸೈದ್ದಾಂತಿಕ ಹೋರಾಟದಲ್ಲಿ ವಿಫಲವಾಗಿದೆ ಅಂತ ಟೀಕಿಸಿದ್ದಾರೆ. ಅಂದ್ಹಾಗೆ ನಿನ್ನೆ ಹುಬ್ಬಳ್ಳಿಯಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಜೊತೆ ಶೆಟ್ಟರ್ ವೇದಿಕೆ ಹಂಚಿಕೊಂಡಿದ್ರು.
-masthmagaa.com
Contact Us for Advertisement