ಕರ್ನಾಟಕ ಹೈಕೋರ್ಟ್‌ನ ಮುಖ್ಯನ್ಯಾಯಾಧೀಶರಾಗಿ ಪ್ರಮಾಣ ವಚನ ಸ್ವೀಕರಿಸಿದ ಪಿ ಬಿ ವರಳೆ!

masthmagaa.com:

ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಾಧೀಶರಾಗಿ ಪಿ ಬಿ ವರಳೆ ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಜಭವನದ ಗಾಜಿನ ಮನೆಯಲ್ಲಿ ಈ ಸಮಾರಂಭ ನಡೆದಿದೆ. ಈ ವೇಳೆ ಪಿ ಬಿ ವರಳೆ ಅವ್ರಿಗೆ ರಾಜ್ಯಪಾಲರಾದ ಥಾವರ್‌ ಚಂದ್‌ ಗೆಹ್ಲೋಟ್ ಪ್ರತಿಜ್ಞಾವಿಧಿ ಬೋಧಿಸಿದ್ದಾರೆ. ಸಮಾರಂಭದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ, ಸಚಿವ ಗೋವಿಂದ ಕಾರಜೋಳ ಸೇರಿದಂತೆ ಅನೇಕ ನಾಯಕರು ಉಪಸ್ಥಿತರಿದ್ರು. ಅಂದ್ಹಾಗೆ ಈ ಹಿಂದೆಯಿದ್ದ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಅಭಯ್.ಎಸ್ ಓಕಾ ಅವರು ಸುಪ್ರೀಂಕೋರ್ಟ್ ನ್ಯಾಯಮೂರ್ತಿಯಾಗಿ ಬಡ್ತಿ ಪಡೆದಿದ್ರು. ಇದರ ಹಿನ್ನೆಲೆ ಬಾಂಬೆ ಹೈಕೋರ್ಟ್‍ನ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸಿದ್ದ ಪಿ.ಬಿ.ವರಳೆ ಅವರನ್ನ ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯನ್ನಾಗಿ ನೇಮಕ ಮಾಡೋಕೆ ಅಕ್ಟೋಬರ್11ರಂದು ಆದೇಶ ಹೊರಡಿಸಲಾಗಿತ್ತು.

-masthmagaa.com

Contact Us for Advertisement

Leave a Reply