ಪಾಕ್‌ ಪರ ಘೋಷಣೆ ವಿಚಾರ: ಕಮಲ ಪಡೆ ವಿರುದ್ದ ಕೆರಳಿದ ಸಿಎಂ!

masthmagaa.com:

ವಿಧಾನಸೌಧದಲ್ಲಿ ಪಾಕ್‌ ಪರ ಘೋಷಣೆ ಕೂಗಿದ ವಿಚಾರವಾಗಿ ವಿಧಿವಿಜ್ಞಾನ ಪ್ರಯೋಗಾಲಯದ (Forensic Lab) ವರದಿ ಇನ್ನು ಬಂದಿಲ್ಲ ಅಂತ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ. ವರದಿ ಬಂದ ಬಳಿಕ ತಪ್ಪಿತಸ್ಥರ ವಿರುದ್ದ ಕಠಿಣ ಕ್ರಮ ಕೈಗೊಳ್ಳಲಾಗುತ್ತೆ ಅಂತ ತಿಳಿಸಿದ್ದಾರೆ. ಇನ್ನು ಈ ವಿಚಾರವಾಗಿ ಇದೀಗ ಸದನದಲ್ಲಿ ಸರ್ಕಾರ ಹಾಗೂ ಪ್ರತಿಪಕ್ಷಗಳ ಮಧ್ಯೆ ವಾಕ್‌ ಸಮರ ಮುಂದುವರೆದಿದೆ. ಪ್ರಕರಣ ನಡೆದು 60 ಗಂಟೆಗಳು ಕಳೆದಿವೆ. ಈವರೆಗೂ ಯಾರನ್ನು ಬಂಧಿಸಿಲ್ಲ. ಇಡೀ ಸಚಿವ ಸಂಪುಟ ಘೋಷಣೆ ಪರ ಕೂಗಿದವರ ಪರವಿದೆ. ನೀವು (ಕಾಂಗ್ರೆಸ್) ಶತ್ರು ರಾಷ್ಟ್ರ ಅನ್ನುವುದನ್ನು ಒಪ್ಪಿಕೊಳ್ಳಿ ಎಂದರೆ, ಅದು ನಮ್ಮ ನೆರೆ ರಾಷ್ಟ್ರ ಎನ್ನುತ್ತಾರೆ ಅಂದಿದ್ದಾರೆ. ಅಂದ್ಹಾಗೆ . ಬಿಜೆಪಿಗೆ ಪಾಕಿಸ್ತಾನ ಶತ್ರು ರಾಷ್ಟ್ರ ಇರಬಹುದು. ಆದರೆ, ನಮಗಲ್ಲ. ಪಾಕ್ ನಮ್ಮ ನೆರೆಯ ರಾಷ್ಟ್ರ ಅಂತ ಕಾಂಗ್ರೆಸ್ ಎಂಎಲ್​ಸಿ ಬಿಕೆ ಹರಿಪ್ರಸಾದ್ ಅವರು ಪರಿಷತ್​ನಲ್ಲಿ ಹೇಳಿಕೆ ನೀಡಿದ್ರು.

-masthmagaa.com

Contact Us for Advertisement

Leave a Reply