masthmagaa.com:
ಮಹಾರಾಷ್ಟ್ರ: ಇತ್ತೀಚೆಗೆ ಮಹಾರಾಷ್ಟ್ರದ ಪಾಲ್ಘರ್ನಲ್ಲಿ ನಡೆದ ಸಾಧುಗಳ ಹತ್ಯೆ ಬಗ್ಗೆ ಕೇಂದ್ರ ಗೃಹ ಇಲಾಖೆ ಮಹಾರಾಷ್ಟ್ರ ಸರ್ಕಾರದ ಬಳಿ ಉತ್ತರ ಕೇಳಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ, ಸಾಧುಗಳನ್ನು ಹತ್ಯೆಗೈದ ಆರೋಪಿಗಳನ್ನು ಅರೆಸ್ಟ್ ಮಾಡಿದ್ದೇವೆ. ಈಗಾಗಲೇ ಅವರು ಜೈಲಿನಲ್ಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ. ಜೊತೆಗೆ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸೋದಾಗಿ ತಿಳಿಸಿದ್ದಾರೆ.
2 ದಿನಗಳ ಹಿಂದೆ ಪಾಲ್ಘರ್ನ ಗಡ್ಚಿಂಚಲೆ ಗ್ರಾಮದಲ್ಲಿ ಇಬ್ಬರು ಸಾಧುಗಳು ಸೇರಿದಂತೆ ಮೂವರನ್ನು ಜನರು ಹೊಡೆದು ಕೊಂದು ಹಾಕಿದ್ದರು. ಮಕ್ಕಳನ್ನು ಅಪಹರಿಸಿ, ಕಿಡ್ನಿ ಮಾರಾಟ ಮಾಡ್ತಾರೆ ಅನ್ನೋ ವದಂತಿಯನ್ನು ನಂಬಿದ್ದ ಜನ ಈ ಕೃತ್ಯ ಎಸಗಿದ್ದರು. ಈ ವೇಳೆ ತಡೆಯಲು ಬಂದ ಪೊಲೀಸರ ಮೇಲೂ ಹಲ್ಲೆ ನಡೆಸಿ, ಗಸ್ತು ವಾಹನದ ಗಾಜುಗಳನ್ನು ಒಡೆದು ಹಾಕಿದ್ದರು. ಮೃತಪಟ್ಟ ಮೂವರಲ್ಲಿ ಇಬ್ಬರು ಸಾಧುಗಳು ಮತ್ತು ಓರ್ವ ಸಾಧುಗಳ ಕಾರು ಚಾಲಕ ಎಂದು ತಿಳಿದು ಬಂದಿತ್ತು. ಪ್ರಕರಣ ಸಂಬಂಧ 100 ಮಂದಿಯನ್ನು ಕಸ್ಟಡಿಗೆ ಪಡೆಯಲಾಗಿದ್ದು, ವಿಚಾರಣೆ ಕೂಡ ನಡೆಯುತ್ತಿದೆ.
-masthmagaa.com
Contact Us for Advertisement