masthmagaa.com:
ಕೃಷಿ ಕಾಯ್ದೆಗಳನ್ನ ವಿರೋಧಿಸಿ ದೆಹಲಿಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆಯನ್ನ ಬೆಂಬಲಿಸಿ ಮತ್ತು ‘ರೈತರಿಗೆ ಕೇಂದ್ರ ಸರ್ಕಾರ ಮಾಡಿದ ದ್ರೋಹ’ವನ್ನ ವಿರೋಧಿಸಿ ಪಂಜಾಬ್ನ ಮಾಜಿ ಸಿಎಂ ಪ್ರಕಾಶ್ ಸಿಂಗ್ ಬಾದಲ್ ತಮಗೆ ಬಂದಿದ್ದ ಪದ್ಮ ವಿಭೂಷಣ ಪ್ರಶಸ್ತಿಯನ್ನ ವಾಪಸ್ ನೀಡಿದ್ದಾರೆ. ರೈತರ ಪ್ರತಿಭಟನೆಯನ್ನ ಬೆಂಬಲಿಸಿ ನಾಗರಿಕ ಪ್ರಶಸ್ತಿಯನ್ನ ಹಿಂದಿರುಗಿಸಿದ ಮೊದಲ ವ್ಯಕ್ತಿ ಇವರಾಗಿದ್ದಾರೆ. ಅಂದ್ಹಾಗೆ 92 ವರ್ಷ ವಯಸ್ಸಿನ ಪ್ರಕಾಶ್ ಸಿಂಗ್ ಬಾದಲ್ 2015ರಲ್ಲಿ ಈ ಪ್ರಶಸ್ತಿ ಪಡೆದಿದ್ದರು. ಇದು ದೇಶದ ಎರಡನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾಗಿದೆ. ಇದೇ ಪ್ರಕಾಶ್ ಸಿಂಗ್ ಬಾದಲ್ ಅವರ ಶಿರೋಮಣಿ ಅಕಾಲಿ ದಳವು ಕೃಷಿ ಕಾಯ್ದೆಗಳನ್ನ ವಿರೋಧಿಸಿ NDA ಮೈತ್ರಿಕೂಟದಿಂದ ಇತ್ತೀಚೆಗೆ ಹೊರ ಬಂದಿತ್ತು.
ಮತ್ತೊಂದುಕಡೆ ಶಿರೋಮಣಿ ಅಕಾಲಿ ದಳ (ಡೆಮಾಕ್ರೆಟಿಕ್) ಪಕ್ಷದ ಮುಖ್ಯಸ್ಥ ಮತ್ತು ರಾಜ್ಯಸಭಾ ಸದಸ್ಯ ಸುಖ್ದೇವ್ ಸಿಂಗ್ ಧಿಂಡ್ಸಾ ಕೂಡ ತಮಗೆ ಬಂದಿರುವ ಪದ್ಮ ಭೂಷಣ ಪ್ರಶಸ್ತಿಯನ್ನು ಹಿಂದಿರುಗಿಸುವುದಾಗಿ ಹೇಳಿದ್ದಾರೆ. ಈ ಮೂಲಕ ಕೇಂದ್ರ ಸರ್ಕಾರಕ್ಕೆ ಖಡಕ್ ಸಂದೇಶ ರವಾನಿಸಲು ಮುಂದಾಗಿದ್ದಾರೆ.
-masthmagaa.com
Contact Us for Advertisement