masthmagaa.com:
ಅಯೋಧ್ಯೆ: ಮಹಾರಾಷ್ಟ್ರ ಸಿಎಂ ಆದ ಬಳಿಕ ಮೊದಲ ಬಾರಿಗೆ ಉತ್ತರ ಪ್ರದೇಶದ ಅಯೋಧ್ಯೆಗೆ ಭೇಟಿ ನೀಡಿದ ಉದ್ಧವ್ ಠಾಕ್ರೆ, ರಾಮ ಮಂದಿರ ನಿರ್ಮಾಣಕ್ಕಾಗಿ ತಮ್ಮ ಟ್ರಸ್ಟ್ನಿಂದ 1 ಕೋಟಿ ರೂಪಾಯಿ ನೀಡುವುದಾಗಿ ಘೋಷಣೆ ಮಾಡಿದ್ದಾರೆ. ಇದೇ ವೇಳೆ ಮಾತನಾಡಿದ ಅವರು, ನಾನು ಬಿಜೆಪಿಯಿಂದ ಬೇರ್ಪಟ್ಟಿದ್ದೀನಿಯೇ ಹೊರತು ಹಿಂದುತ್ವದಿಂದ ಅಲ್ಲ. ಬಿಜೆಪಿ ಅಂದರೆ ಹಿಂದುತ್ವ ಅಲ್ಲ. ಹಿಂದುತ್ವ ಬೇರೆ, ಬಿಜೆಪಿ ಬೇರೆ ಎಂದಿದ್ದಾರೆ.
ಕಳೆದ ವರ್ಷ ಬಿಜೆಪಿ ಜೊತೆ ಮೈತ್ರಿ ಮುರಿದುಕೊಂಡ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ ಪಕ್ಷ ಎನ್ಸಿಪಿ ಹಾಗೂ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡು ಮಹಾರಾಷ್ಟ್ರದಲ್ಲಿ ಸರ್ಕಾರ ರಚಿಸಿತು. ಅದಾದ ಬಳಿಕ ಬಿಜೆಪಿ ಹಾಗೂ ಶಿವಸೇನೆ ನಾಯಕರ ನಡುವೆ ಮಾತಿನ ಸಮರ ನಡೆಯುತ್ತಲೇ ಇದೆ.
-masthmagaa.com
Contact Us for Advertisement