ಭಾರತ ಲಾಕ್​ಡೌನ್​: ಪೌರ ಕಾರ್ಮಿಕರ ಮೇಲೆ ಹೂಮಳೆ…ದುಡ್ಡಿನ ಹಾರ..!

masthmagaa.com:

ಪಂಜಾಬ್​​: ಕೊರೋನಾ ಭೀತಿ ಹಿನ್ನೆಲೆಯಲ್ಲಿ ದೇಶ ಲಾಕ್​ಡೌನ್ ಮಾಡಲಾಗಿದ್ದು, ಎಲ್ಲರೂ ತಮ್ಮ ತಮ್ಮ ಮನೆಗಳಲ್ಲಿ ಬಂಧಿಯಾಗಿದ್ದಾರೆ. ಆದ್ರೆ ವೈದ್ಯಕೀಯ ಸಿಬ್ಬಂದಿ, ಪೊಲೀಸರು, ಯೋಧರು, ಪೌರ ಕಾರ್ಮಿಕರು ಸೇರಿದಂತೆ ಹಲವು ಕ್ಷೇತ್ರದವರು ತಮ್ಮ ಸೇವೆಯನ್ನು ಮುಂದುವರಿಸಿದ್ದಾರೆ. ಹೀಗಾಗಿ ಪಂಜಾಬ್​​ನ ಪಟಿಯಾಲದಲ್ಲಿ ಪೌರ ಕಾರ್ಮಿಕರ ಮೇಲೆ ಹೂವಿನ ಮಳೆ ಸುರಿಸಲಾಗಿದೆ. ಅಲ್ಲದೆ ಕುತ್ತಿಗೆಗೆ ಹೂವು ಮತ್ತು ನೋಟಿನ ಹಾರ ಹಾಕಿ, ಅವರ ಸೇವೆಗೆ ಕೃತಜ್ಞತೆ ಸಲ್ಲಿಸಲಾಗಿದೆ. ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ತುಂಬಾ ವೈರಲ್ ಆಗಿದೆ.

-masthmagaa.com

Contact Us for Advertisement

Leave a Reply