masthmagaa.com:
ತಮಿಳುನಾಡು: ಈ ಸಲ ಐಪಿಎಲ್ ನಡೆಯೋದೇ ಡೌಟ್.. ಯಾಕಂದ್ರೆ ಐಪಿಎಲ್ ಕ್ಯಾನ್ಸಲ್ ಮಾಡಬೇಕು ಎಂದು ಒತ್ತಾಯಿಸಿ ಮದ್ರಾಸ್ ಹೈಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ. ವಕೀಲರಾದ ಜಿ ಅಲೆಕ್ಸ್ ಬೆನ್ಜೀಗರ್ ಎಂಬುವವರು ಈ ಅರ್ಜಿ ಸಲ್ಲಿಸಿದ್ದು, ಮದ್ರಾಸ್ ಹೈಕೋರ್ಟ್ನಲ್ಲಿ ಮಾರ್ಚ್ 12ರಂದು ಅರ್ಜಿ ವಿಚಾರಣೆಗೆ ಬರುವ ಸಾಧ್ಯತೆ ಇದೆ.
ಇದೇ ಮಾರ್ಚ್ 29ರಿಂದ 13ನೇ ಆವೃತ್ತಿಯ ಐಪಿಎಲ್ ಆರಂಭವಾಗಲಿದ್ದು, ಮೇ 24ರವರೆಗೂ ನಡೆಯಲಿದೆ. 2 ದಿನಗಳ ಹಿಂದೆ ಮಹಾರಾಷ್ಟ್ರ ಆರೋಗ್ಯ ಸಚಿವರು ಐಪಿಎಲ್ ಮುಂದೂಡಿಕೆ ಬಗ್ಗೆ ಚರ್ಚೆ ನಡೆಯುತ್ತಿದೆ ಎಂದು ತಿಳಿಸಿದ್ದರು. ಆದ್ರೆ ಈ ಬಗ್ಗೆ ಪ್ರತಿಕ್ರಿಯಿಸಿದ್ದ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ, ಐಪಿಎಲ್ ಮುಂದೂಡಿಕೆ ಸಾಧ್ಯವಿಲ್ಲ. ನಿಗದಿತ ವೇಳಾಪಟ್ಟಿಯಂತೆಯೇ ಐಪಿಎಲ್ ಪಂದ್ಯಗಳು ನಡೆಯಲಿವೆ. ಬಿಸಿಸಿಐ ಕಡೆಯಿಂದಲೇ ಕೊರೋನಾ ವೈರಸ್ಗೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗುತ್ತೆ ಎಂದಿದ್ದರು.
ಈ ನಡುವೆ ಕರ್ನಾಟಕ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ಕೂಡ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದು, ಬೆಂಗಳೂರಿನಲ್ಲಿ ಐಪಿಎಲ್ ಪಂದ್ಯ ಆಯೋಜನೆ ಬಗ್ಗೆ ಯಾವ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಸಲಹೆ ಕೇಳಿದ್ದಾರೆ.
-masthmagaa.com
Contact Us for Advertisement