masthmagaa.com:
AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಅವರ ಕುಟುಂದವ್ರ ಹತ್ಯೆಗೆ ಬಿಜೆಪಿ ಸಂಚು ಮಾಡಿದೆ ಅಂತ AICCಯ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ಗಂಭೀರ ಆರೋಪ ಮಾಡಿದ್ದಾರೆ. ಹತ್ಯೆಗೆ ಸಂಚು ನಡೆದಿದ್ರೂ ಮೋದಿ ಹಾಗೂ ಬಿಜೆಪಿ ನಾಯಕರು ಮೌನಕ್ಕೆ ಶರಣಾಗಿದ್ದಾರೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕರ್ನಾಟಕ ರಾಜ್ಯದ ಜನ ಕಾಂಗ್ರೆಸ್ ಪಕ್ಷಕ್ಕೆ ಸಂಪೂರ್ಣ ಬೆಂಬಲ ತೋರಿಸುತ್ತಿದ್ದಾರೆ. ಅದಕ್ಕೆ ಕೆಂಗೆಟ್ಟಿರುವ ಬಿಜೆಪಿ ಖರ್ಗೆ ಹಾಗೂ ಅವರ ಕುಟುಂಬದವ್ರ ಹತ್ಯೆಗೆ ಸಂಚು ರೂಪಿಸಿದೆ ಅಂತ ರಣದೀಪ್ ಸುರ್ಜೇವಾಲ ಹೇಳಿದ್ದಾರೆ. ಅಲ್ದೇ ʻಮೋದಿ ಹಾಗೂ ಸಿಎಂ ಬೊಮ್ಮಾಯಿ ಅವರ ಆತ್ಮೀಯ ಹುಡುಗ ಚಿತ್ತಾಪುರದ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಥೋಡ್ ಅವರ ಆಡಿಯೋದಲ್ಲಿ ಹತ್ಯೆಯ ಸಂಚು ಸ್ಪಷ್ಟವಾಗಿದೆ ಎಂದಿದ್ದಾರೆ. ಅಂದ್ಹಾಗೆ ಚಿತ್ತಾಪುರದ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಥೋಡ್ ಅವರದ್ದು ಎನ್ನಲಾದ ಆಡಿಯೋದಲ್ಲಿ ʻಮಲ್ಲಿಕಾರ್ಜುನ ಖರ್ಗೆ, ಹೆಂಡ್ರು ಮಕ್ಕಳನ್ನ ಸಾಫ್ ಮಾಡ್ತೀನಿʼ ಅಂತ ಹೇಳಿರೋದು ಕೇಳಿ ಬಂದಿದೆ. ಇದನ್ನೇ ಕಾಂಗ್ರೆಸ್ ಅಸ್ತ್ರವಾಗಿಟ್ಟುಕೊಂಡಿದ್ದು ಖರ್ಗೆ ಹತ್ಯೆಗೆ ಸಂಚು ನಡೆದಿದೆ ಅಂತ ಆರೋಪ ಮಾಡಿದೆ. ಇನ್ನು ಚಿತ್ತಾಪುರದ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕ್ ಖರ್ಗೆ ಅವ್ರಿಗೆ ಕೊಲೆ ಬೆದರಿಕೆ ಹಾಕಿದ ಆರೋಪದ ಮೇಲೆ ಮಣಿಕಂಠ ಅವ್ರನ್ನ ಕಳೆದ ವರ್ಷ ನವಂಬರ್ನಲ್ಲಿ ಅರೆಸ್ಟ್ ಮಾಡಲಾಗಿತ್ತು. ಬಳಿಕ ಜಾಮೀನಿನ ಮೇಲೆ ರಿಲೀಸ್ ಆಗಿದ್ದ ಮಣಿಕಂಠ, ಪ್ರಿಯಾಂಕ್ ಖರ್ಗೆ ಅವ್ರನ್ನ ಹೊಡೆದುರಳಿಸಲು ಸಿದ್ದ ಅಂತ ಬಹಿರಂಗವಾಗಿಯೇ ಹೇಳಿಕೆ ನೀಡಿದ್ರು. ಈ ನಡುವೆಯೇ ಕಾಂಗ್ರೆಸ್ ಈ ಆರೋಪ ಮಾಡಿದ್ದು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಇತ್ತ ಸಿಎಂ ಬೊಮ್ಮಾಯಿ ಕೂಡ ಪ್ರತಿಕ್ರಿಯಿಸಿದ್ದು ಈ ಪ್ರಕರಣದ ಕುರಿತು ತನಿಖೆ ನಡೆಯುತ್ತೆ ಅಂತ ಹೇಳಿದ್ದಾರೆ. ಆದ್ರೆ ಈ ಎಲ್ಲಾ ಆರೋಪಗಳನ್ನ ಬಿಜೆಪಿ ಅಭ್ಯರ್ಥಿ ಮಣಿಕಂಠ ಅವರು ನಿರಾಕರಿಸಿದ್ದಾರೆ. ನಕಲಿ ಆಡಿಯೋ ಸೃಷ್ಠಿಸಿ ನನ್ನ ವಿರುದ್ಧ ಸುಳ್ಳು ಆರೋಪಗಳನ್ನ ಮಾಡಲಾಗ್ತಿದೆ ಅಂತ ಹೇಳಿದ್ದಾರೆ. ಇತ್ತ ನಾವು ಈ ಪ್ರಕರಣವನ್ನ ಗಂಭೀರವಾಗಿ ಪರಿಗಣಿಸ್ತೇವೆ. ತನಿಖೆ ನಡೆಸಿ ತಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ತೇವೆ ಅಂತ ಸಿಎಂ ಬೊಮ್ಮಾಯಿ ಹೇಳಿದ್ದಾರೆ.
-masthmagaa.com
Contact Us for Advertisement