ಸ್ವಚ್ಛ ಭಾರತ: ಕಸಗೂಡಿಸಿದ ಮೋದಿ, ಅಮಿತ್‌ ಶಾ, ಯೋಗಿ

masthmagaa.com:

ಪ್ರಧಾನಿ ನರೇಂದ್ರ ಮೋದಿಯವರು ಕರೆಕೊಟ್ಟಿರುವ ಸ್ವಚ್ಛತ ಭಾರತ ಅಭಿಯಾನದ ಶ್ರಮದಾನಕ್ಕೆ ದೇಶದಾದ್ಯಂತ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಮಕ್ಕಳಿಂದ ಹಿಡಿದು ರಾಜಕೀಯ ನಾಯಕರವರೆಗೂ ಒಂದು ಗಂಟೆಯ ಶ್ರಮದಾನದಲ್ಲಿ ಪಾಲ್ಗೊಂಡಿದ್ದಾರೆ. ಮೋದಿಯವರು ಕೂಡ ಕುಸ್ತಿಪಟು ಅಂಕಿತ್ ಬೈಯನ್ ಪುರಿಯಾ ಅವರೊಂದಿಗೆ ಪಾರ್ಕ್‌ನಲ್ಲಿ ಕಸ ಗುಡಿಸುವ ಮೂಲಕ ಸ್ವಚ್ಛತಾ ಅಭಿಯಾನದಲ್ಲಿ ಪಾಲ್ಗೊಂಡಿದ್ದಾರೆ. ಇತ್ತ ಕೇಂದ್ರ ಮಂತ್ರಿಗಳಾದ ಅಮಿತ್‌ ಶಾ, ಪಿಯೂಷ್‌ ಗೋಯಲ್‌ ಹಾಗೂ ಉತ್ತರ ಪ್ರದೇಶ ಸಿಎಂ ಯೋಗಿ ಅದಿತ್ಯನಾಥ್‌ ಸೇರಿದಂತೆ ಹಲವು ಗಣ್ಯರು ಸ್ವಚ್ಛತೆಗಾಗಿ ಶ್ರಮದಾನ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ.

-masthmagaa.com

Contact Us for Advertisement

Leave a Reply