masthmagaa.com:
ಸಂಸತ್ತಿನ ಬಜೆಟ್ ಅಧಿವೇಶನ ಆರಂಭವಾದ ಹಿನ್ನಲೆಯಲ್ಲಿ ಈ ಕಡೆ ಪ್ರಧಾನಿ ಮೋದಿ ಅವರು ಕೇಂದ್ರ ಸಚಿವರೊಂದಿಗೆ ಸಭೆ ನಡೆಸಿದ್ದಾರೆ. ಗೃಹ ಸಚಿವ ಅಮಿತ್ ಶಾ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಅನುರಾಗ್ ಠಾಕೂರ್, ಪಿಯೂಷ್ ಗೋಯೆಲ್, ನಿತಿನ್ ಗಡ್ಕರಿ ಹಾಗೂ ಕಿರಣ್ ರಿಜಿಜು ಅವರ ಜೊತೆ ಸಭೆ ನಡೆಸಿದ್ದಾರೆ. ಸಂಸತ್ತಿನಲ್ಲಿ ಅನುಸರಿಸಬೇಕಾದ ಕಾರ್ಯತಂತ್ರಗಳ ಕುರಿತು ಹಾಗೇ ವಿರೋಧ ಪಕ್ಷಗಳು ಎತ್ತಿರುವ ಪ್ರಶ್ನೆಗಳು, ಅವ್ರಿಗೆ ಹೇಗೆ ಪ್ರತಿಕ್ರಿಯಿಸಬೇಕು ಅನ್ನೊ ಬಗ್ಗೆ ಚರ್ಚಿಸಲಾಗಿದೆ. ಮತ್ತೊಂದೆಡೆ ವಿರೋಧ ಪಕ್ಷಗಳು ಕೂಡ ಸಭೆ ನಡೆಸಿ ಯಾವೆಲ್ಲ ವಿಷಯಗಳ ಬಗ್ಗೆ ಪ್ರಶ್ನಿಸಬೇಕು ಅನ್ನೊ ಕುರಿತು ಚರ್ಚೆ ಮಾಡಿದ್ದಾರೆ ಅಂತ ಮಾಹಿತಿ ಲಭ್ಯವಾಗಿದೆ.
-masthmagaa.com
Contact Us for Advertisement