masthmagaa.com:
ದೆಹಲಿ: ದಕ್ಷಿಣ ಏಷ್ಯಾದಲ್ಲಿ ಕೊರೋನಾ ವೈರಸ್ ವೇಗವಾಗಿ ಹಬ್ಬುತ್ತಿದ್ದು, ಬಾಂಗ್ಲಾದೇಶದ ಢಾಕಾದಲ್ಲೂ ಮೂರು ಪ್ರಕರಣಗಳು ಪತ್ತೆಯಾಗಿವೆ. ಈ ನಡುವೆ ಪ್ರಧಾನಿ ಮೋದಿ ತಮ್ಮ ಬಾಂಗ್ಲಾದೇಶ ಪ್ರವಾಸವನ್ನು ರದ್ದುಗೊಳಿಸಿದ್ದಾರೆ. ಮಾರ್ಚ್ 17ರಂದು ಬಾಂಗ್ಲಾದೇಶದ ರಾಷ್ಟ್ರಪಿತ ಶೇಖ್ ಮುಜಿಬುರ್ ರೆಹಮಾನ್ ಅವರ 100ನೇ ಜನ್ಮದಿನೋತ್ಸವ ಆಚರಿಸಲು ನಿರ್ಧರಿಸಲಾಗಿತ್ತು. ಈ ಕಾರ್ಯಕ್ರಮಕ್ಕೆ ಪ್ರಧಾನಿ ಮೋದಿಯವರಿಗೂ ಆಹ್ವಾನ ನೀಡಲಾಗಿತ್ತು. ಆದ್ರೆ ಢಾಕಾದಲ್ಲಿ ಕೊರೋನಾ ವೈರಸ್ ಪ್ರಕರಣಗಳು ಪತ್ತೆಯಾಗಿತ್ತು. ಹೀಗಾಗಿ ಕೊರೋನಾ ವೈರಸ್ ಹರಡುವ ಭೀತಿ ಹಿನ್ನೆಲೆಯಲ್ಲಿ ಶೇಖ್ ಮುಜಿಬುರ್ ರೆಹಮಾನ್ ಅವರ ಜನ್ಮದಿನಾಚರಣೆ ಕಾರ್ಯಕ್ರಮವನ್ನು ಬಾಂಗ್ಲಾದೇಶ ಸರ್ಕಾರ ರದ್ದುಪಡಿಸಿದೆ.
-masthmagaa.com
Contact Us for Advertisement