masthmagaa.com:
ಪ್ರಧಾನಿ ನರೇಂದ್ರ ಮೋದಿಯವರು ಇಂದು ಚತ್ತೀಸ್ಗಢಕ್ಕೆ ಭೇಟಿ ನೀಡಿದ್ದು, ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದಾರೆ. ಈ ವೇಳೆ 7,600 ಕೋಟಿ ಮೌಲ್ಯದ ವಿವಿಧ ಯೋಜನೆಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿದ್ದಾರೆ. ರಾಯಪುರದಲ್ಲಿ ನಡೆದ ರ್ಯಾಲಿಯಲ್ಲಿ ಮಾತಾಡಿರೋ ಮೋದಿ, ಕಾಂಗ್ರೆಸ್ ಭ್ರಷ್ಟಾಚಾರಕ್ಕೆ ಗ್ಯಾರಂಟಿಯಾದ್ರೆ ಅದರ ವಿರುದ್ಧ ಕ್ರಮ ಕೈಗೊಳ್ಳೋಕೆ ಮೋದಿ ಗ್ಯಾರಂಟಿ ಅಂತ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಇನ್ನೊಂದ್ ಕಡೆ ಚತ್ತೀಸ್ಗಢ ಭೇಟಿ ಬಳಿಕ ಉತ್ತರ ಪ್ರದೇಶಕ್ಕೆ ಭೇಟಿ ನೀಡಿರೋ ಮೋದಿ 2 ವಂದೇ ಭಾರತ್ ಎಕ್ಸ್ಪ್ರೆಸ್ ರೈಲುಗಳಿಗೆ ಚಾಲನೆ ನೀಡಿದ್ದಾರೆ. ಮತ್ತೊಂದ್ ಕಡೆ ಮೋದಿಯವರ ರಾಯಪುರ ರ್ಯಾಲಿಗೆ ಜನರನ್ನ ಕರೆದುಕೊಂಡು ಹೋಗ್ತಿದ್ದ ಬಸ್ ಒಂದು ನಿಂತಿದ್ದ ಟ್ರಕ್ಗೆ ಡಿಕ್ಕಿ ಹೊಡೆದ ಪರಿಣಾಮ 3 ಜನ ಮೃತಪಟ್ಟಿರೋ ಘಟನೆ ಛತ್ತೀಸ್ಗಢದ ಬಿಲಾಸ್ಪುರನಲ್ಲಿ ನಡೆದಿದೆ. ಈ ಘಟನೆಯಲ್ಲಿ 6 ಮಂದಿ ಗಾಯಗೊಂಡಿದ್ದು, ಆಸ್ಪತ್ರೆಗೆ ಸೇರಿಸಲಾಗಿದೆ ಅಂತ ಪೊಲೀಸರು ತಿಳಿಸಿದ್ದಾರೆ.
-masthmagaa.com
Contact Us for Advertisement