ಸಂಸತ್‌ ಬಜೆಟ್‌ ಅಧಿವೇಶನ: ಮೊದಲ ದಿನವೇ ಉಭಯ ಸದನಗಳಲ್ಲಿ ಭಾರಿ ಗಲಾಟೆ, ಕಲಾಪ ನಾಳೆಗೆ ಮುಂದೂಡಿಕೆ

masthmagaa.com:

ಸಂಸತ್ತಿನ ಬಜೆಟ್‌ ಅಧಿವೇಶನದ 2ನೇ ಹಂತ ಇಂದಿನಿಂದ ಶುರುವಾಗಿದೆ. ಆದರೆ ಮೊದಲ ದಿನವೇ ಲೋಕಸಭೆ ಹಾಗೂ ರಾಜ್ಯಸಭೆಗಳಲ್ಲಿ ಭಾರಿ ಗಲಾಟೆ ಆಗಿದೆ. ಬಿಜೆಪಿ ಹಾಗೂ ಪ್ರತಿಪಕ್ಷಗಳ ನಡುವೆ ದೊಡ್ಡ ಮಟ್ಟದ ಗಲಾಟೆ ನಡೆದ ಹಿನ್ನೆಲೆಯಲ್ಲಿ ಉಭಯ ಸದನಗಳನ್ನ ನಾಳೆ ಬೆಳಿಗ್ಗೆ 11 ಗಂಟೆಗೆ ಮುಂದೂಡಲಾಗಿದೆ. ಕಲಾಪ ಶುರುವಾಗ್ತಿದ್ದಂತೆ ಬಿಜೆಪಿ ಸಂಸದರು ಹಾಗೂ ಕೇಂದ್ರ ಸಚಿವರು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ವಿರುದ್ದ ತಿರುಗಿಬಿದ್ರು. ರಾಹುಲ್‌ ಗಾಂಧಿ ಲಂಡನ್‌ಗೆ ತೆರಳಿ ಅಲ್ಲಿ ಭಾರತದ ಪ್ರಜಾಪ್ರಭುತ್ವವನ್ನ ಅವಹೇಳನ ಮಾಡಿದ್ದಾರೆ. ಅವರು ಕೂಡಲೇ ಕ್ಷಮೆ ಕೇಳಬೇಕು ಅಂತ ಆಗ್ರಹಿಸಿದ್ದಾರೆ. ಆದ್ರೆ ಕಾಂಗ್ರೆಸ್‌ ನಾಯಕರು ಬಿಜೆಪಿ ವಿರುದ್ದ ಹರಿಹಾಯ್ದಿದ್ರು. ರಾಹುಲ್‌ ಕ್ಷಮೆ ಕೇಳಲ್ಲ ಅಂತ ಪಟ್ಟು ಹಿಡಿದಿದ್ದಾರೆ. ಹೀಗೆ ಗಲಾಟೆ ಮುಂದುವರೆದ ಕಾರಣ ಸದನಗಳ ಕಲಾಪವನ್ನ ನಾಳೆಗೆ ಮುಂದೂಡಲಾಯ್ತು.

-masthmagaa.com

Contact Us for Advertisement

Leave a Reply