ಏಪ್ರಿಲ್‌ 29ರಂದು ಪ್ರಧಾನಿ ಮೋದಿ ಹಾಗೂ ಯೋಗಿ ಆದಿತ್ಯನಾಥ್‌ ರಾಜ್ಯಕ್ಕೆ!

masthmagaa.com:

ಏಪ್ರಿಲ್‌ 29ರಂದು ಬೆಳಗಾವಿ ಜಿಲ್ಲೆಯ ಕುಡಚಿಗೆ ಪ್ರಧಾನಿ ಮೋದಿ ಹಾಗೂ ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್‌ ಆಗಮಿಸಲಿದ್ದಾರೆ ಅಂತ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಹೇಳಿದ್ದಾರೆ. ಇದೇ ವೇಳೆ ಜಗದೀಶ್‌ ಶೆಟ್ಟರ್‌ ಬಗ್ಗೆ ಮಾತಾಡಿದ ಜೋಶಿ, ಹುಬ್ಬಳ್ಳಿ-ಧಾರವಾಡ ಸೆಂಟ್ರಲ್‌ ಕ್ಷೇತ್ರದಲ್ಲಿ ಶೆಟ್ಟರ್‌ ಅವ್ರನ್ನ ಬದಲಾಯಿಸಿ, ಹೊಸಬರಿಗೆ ಅವಕಾಶ ನೀಡಬೇಕು ಅಂತ ಮೋದಿ ಹಾಗೂ ಅಮಿತ್‌ ಶಾ ಅವರೇ ತೀರ್ಮಾನಿಸಿದ್ದಾರೆ ಅಂತ ಹೇಳಿದ್ದಾರೆ. ಜೊತೆಗೆ ಶೆಟ್ಟರ್ ಪಕ್ಷ ಬಿಟ್ಟು ಹೋಗಿರೋದು ಏನೂ ಅಫೆಕ್ಟ್ ಆಗಲ್ಲ. ಹಳೇ ಪ್ಲೇಯರ್ ರಿಟೈರ್ಡ್​​ ಆಗಿ ಅಂದ್ವಿ, ಆದರೆ ಅವರು ಮತ್ತೊಂದು ಟೀಮ್​ನಲ್ಲಿ ಆಡೋಕೆ ಹೋಗಿದ್ದಾರೆ. ಈ ಸಲ ಕಪ್ ನಮ್ದೆ ಅಂತ ಜಗದೀಶ್​ ಶೆಟ್ಟರ್ ವಿರುದ್ಧ ವಾಗ್ದಾಳಿ ಮಾಡಿದರು.‌

-masthmagaa.com

Contact Us for Advertisement

Leave a Reply