-masthmagaa.com:
ದೆಹಲಿ: ಕಳೆದ ವಾರವಷ್ಟೇ ಪ್ರಧಾನಿ ಮೋದಿಯವರು ಕೊರೋನಾ ವೈರಸ್ ವಿಚಾರವಾಗಿ ದೇಶವನ್ನು ಉದ್ದೇಶಿಸಿ ಮಾತನಾಡಿದ್ದರು. ಇದೇ ವೇಳೆ ಜನತಾ ಕರ್ಫ್ಯೂಗೆ ಕರೆ ನೀಡಿದ್ದರು. ಇದೀಗ ಇಂದು ರಾತ್ರಿ 8 ಗಂಟೆಗೆ ಪುನಃ ಪ್ರಧಾನಿ ನರೇಂದ್ರ ಮೋದಿಯವರು ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ತೀವ್ರಗತಿಯಲ್ಲಿ ಹರಡುತ್ತಿರುವ ಮಹಾಮಾರಿ ಜಾಗತಿಕ ಕೊರೋನಾ ಬಗ್ಗೆ ಮಹತ್ವದ ವಿಚಾರವನ್ನು ದೇಶದ ಜನತೆಯೊಂದಿಗೆ ಹಂಚಿಕೊಳ್ಳುತ್ತಿದ್ದೇನೆ. ಇಂದು ರಾತ್ರಿ 8 ಗಂಟೆಗೆ ದೇಶವನ್ನು ಉದ್ದೇಶಿಸಿ ಮಾತನಾಡುತ್ತೇನೆ ಅಂತ ಹೇಳಿದ್ದಾರೆ.
ಭಾರತದಲ್ಲಿ ಕೊರೋನಾ ಪೀಡಿತರ ಸಂಖ್ಯೆ 500ರ ಗಡಿ ದಾಟಿದ್ದು, 10 ಮಂದಿ ಸಾವನ್ನಪ್ಪಿದ್ದಾರೆ. ದೆಹಲಿ, ಉತ್ತರ ಪ್ರದೇಶ, ಬಿಹಾರ, ಗುಜರಾತ್ ಸೇರಿದಂತೆ ಬಹುತೇಕ ಎಲ್ಲಾ ರಾಜ್ಯಗಳು ಲಾಕ್ಡೌನ್ ಘೋಷಿಸಿವೆ. ಅಲ್ಲದೆ ಹಲವರು ರಾಜ್ಯಗಳಲ್ಲಿ ಕರ್ಫ್ಯೂ ಕೂಡ ಹೇರಲಾಗಿದೆ. ಇಂಥಾ ಹೊತ್ತಲ್ಲಿ ಪ್ರಧಾನಿ ಮೋದಿಯವರ ಭಾಷಣ ಸಾಕಷ್ಟು ಮಹತ್ವವನ್ನು ಪಡೆದುಕೊಂಡಿದೆ.
-masthmagaa.com
Contact Us for Advertisement