masthmagaa.com:
ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ನಿನ್ನೆ ಮಾಜಿ ಸಿಎಂ ಸಿದ್ದರಾಮಯ್ಯ ಪರ ಪ್ರಚಾರ ಮಾಡಿದ್ದಾರೆ. ವರುಣಾ ಕೇತ್ರದಲ್ಲಿ ಶಿವರಾಜ್ ಕುಮಾರ್ ಕಾಂಗ್ರೆಸ್ ಪರ ಪ್ಚಾರಕ್ಕಿಳಿದಿದ್ದಾರೆ. ಈ ಬಗ್ಗೆ ಪರ-ವಿರೋಧಗಳು ಕೇಳಿಬರುತ್ತಿವೆ. ಇದೀಗ ಮೈಸೂರು ಬಿಜೆಪಿ ಸಂಸದ ಪ್ರತಾಪ್ ಸಿಂಹ ಈ ಬಗ್ಗೆ ಪರೋಕ್ಷವಾಗಿ ಕಿಡಿಕಾರಿದ್ದಾರೆ. ಸಂಸದ ಪ್ರತಾಪ್ ಸಿಂಹ ಸಿದ್ದರಾಮಯ್ಯ ಪ್ರಚಾರದ ಫೋಟೋವನ್ನು ಟ್ವಿಟರ್ನಲ್ಲಿ ಹಂಚಿಕೊಂಡು, ಪುನೀತ್ ರಾಜಕುಮಾರ್ ಸರ್ ಹೆಸರಿನಲ್ಲಿ ಬಡವರಿಗಾಗಿ ಆಸ್ಪತ್ರೆ ಕಟ್ಟಿದ ಸೋಮಣ್ಣ, ಮನಮೆಚ್ಚಿ ಶ್ಲಾಘಿಸಿದ ರಾಘಣ್ಣ, ಸಿದ್ರಾಮಣ್ಣ ಪರವಾಗಿ ಪ್ರಚಾರಕ್ಕಿಳಿದ ಶಿವಣ್ಣ! ಅವರವ ಭಾವ ಭಕುತಿಗೆ ಎಂದು ಬರೆದುಕೊಂಡಿದ್ದಾರೆ. ಇದಕ್ಕೆ ಪ್ರತಿಕಿಯಿಸಿದ ಶಿವರಾಜ್ ಕುಮಾರ್ ʻಸೋಮಣ್ಣ ವರುಣಾದಲ್ಲಿ ಸ್ಪರ್ಧೆ ಮಾಡುವ ಬಗ್ಗೆ ನನಗೆ ಗೊತ್ತಿರಲಿಲ್ಲ. ಕರೆದರೆ ಅವರ ಪರವಾಗಿಯೂ ನಾನು ಪ್ರಚಾರಕ್ಕೆ ಹೋಗುತ್ತೇನೆ. ಬಿಜೆಪಿಯವರು ಯಾರೂ ನನ್ನನ್ನ ಸಂಪರ್ಕ ಮಾಡಿಲ್ಲʼ ಎಂದು ಸ್ಪಷ್ಟಪಡಿಸಿದ್ದಾರೆ.
ಇನ್ನು ಪ್ರತಾಪ್ ಸಿಂಹ ಟ್ವೀಟ್ಗೆ ನಟ ಪ್ರಕಾಶ್ ರಾಜ್ ಕಿಡಿ ಕಾರಿದ್ದಾರೆ. ಪ್ರಕಾಶ್ ರಾಜ್ ಸಂಸದ ಪ್ರತಾಪ್ ಸಿಂಹ ಅವರನ್ನು ಟ್ಯಾಗ್ ಮಾಡಿ, ʻʻನಿಮ್ಮ ಹೊಲಸು ರಾಜಕಾರಣಕ್ಕೆ ..ನಮ್ಮೆಲ್ಲರ “ಅಪ್ಪು” ಅವರನ್ನ ಯಾಕ್ ಎಳೀತೀರ್ರಿ ಪ್ರತಾಪ್ ಸಿಂಹ ಅವರೆ .. ಛಿ ಛೀ .. ಇದು ತುಂಬಾ ದೊಡ್ಡ ತಪ್ಪು .. ಮಾಡ್ಬೇಡಿ ” ಎಂದಿದ್ದಾರೆ.
-masthmagaa.com:
Contact Us for Advertisement