ಶಿವಮೊಗ್ಗಗೆ ನೋ ಎಂಟ್ರಿ! ಪ್ರಮೋದ್‌ ಮುತಾಲಿಕ್‌ಗೆ ನಿರ್ಬಂಧ ಹೇರಿದ ಸರ್ಕಾರ!

masthmagaa.com:

ಇತ್ತೀಚೆಗೆ ಶಿವಮೊಗ್ಗದ ರಾಗಿಗುಡ್ಡದಲ್ಲಿ ಉಂಟಾಗಿದ್ದ ಗಲಭೆ ಹಿನ್ನಲೆಯಲ್ಲಿ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ ಮುತಾಲಿಕ್ ಅವರು ಒಂದು ತಿಂಗಳು ಶಿವಮೊಗ್ಗ ಜಿಲ್ಲೆಗೆ ಪ್ರವೇಶಿಸದಂತೆ ನಿರ್ಬಂಧ ಹೇರಲಾಗಿದೆ. ಅಕ್ಟೋಬರ್‌ 17ರಿಂದ 30 ದಿನಗಳ ಕಾಲ ಭೇಟಿ ನೀಡದಂತೆ ಮುತಾಲಿಕ್‌ರಿಗೆ ಶಿವಮೊಗ್ಗ ಜಿಲ್ಲಾಡಳಿತ ನಿಷೇಧ ಹೇರಿದೆ. ನಿನ್ನೆ ರಾತ್ರಿ ಪ್ರಮೋದ ಮುತಾಲಿಕ್​ ಮಂಗಳೂರಿನಿಂದ ಶಿವಮೊಗ್ಗಕ್ಕೆ ಹೊರಟ್ಟಿದ್ದಾರೆ. ಆದರೆ ದಾರಿ ಮಧ್ಯೆ ತಡೆದ ಪೊಲೀಸರು, ಬ್ಯಾನ್‌ ನೋಟಿಸ್ ಕೊಟ್ಟಿದ್ದಾರೆ. ಈ ಬಗ್ಗೆ ಮುತಾಲಿಕ್​ ಮಾತನಾಡಿ ಇತ್ತೀಚೆಗೆ ಗಲಾಟೆ ನಡೆದ ಶಿವಮೊಗ್ಗದ ರಾಗಿಗುಡ್ಡ ಭೇಟಿ ನೀಡಲು ಮಂಗಳೂರಿನಿಂದ ಹೊರಟ್ಟಿದ್ದೆ. ಆದರೆ ಪೊಲೀಸರು ಮಾಸ್ತಿಕಟ್ಟೆ ಬಳಿ ತಡೆದು, ನನ್ನನ್ನು ವಶಕ್ಕೆ ಪಡೆದುಕೊಂಡು ದಾವಣಗೆರೆಗೆ ತಂದು ಬಿಟ್ಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

-masthmagaa.com

Contact Us for Advertisement

Leave a Reply