masthamagaa.com:
ಬಿಗ್ಬಾಸ್ ಖ್ಯಾತಿಯ ಪ್ರಶಾಂತ್ ಸಂಬರ್ಗಿ ಬಿಜೆಪಿ ಪರವಾಗಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಸದಾ ಕಾಂಗ್ರೆಸ್ ವಿರುದ್ಧ ಟೀಕೆ, ವ್ಯಂಗ್ಯಗಳನ್ನು ಮಾಡುವ ಪೋಸ್ಟ್ಗಳನ್ನು ಹಾಕುತ್ತಿರುತ್ತಾರೆ. ಇದೀಗ ಶಿವರಾಜ್ ಕುಮಾರ್ ಕಾಂಗ್ರೆಸ್ ಪರ ಪ್ರಚಾರ ಮಾಡುತ್ತಿರುವುದನ್ನು ಟೀಕಿಸಿ, ಶಿವಣ್ಣ ಹಣ ಪಡೆದು ಪ್ರಚಾರ ಮಾಡುತ್ತಿದ್ದಾರೆ ಎಂದಿದ್ದಾರೆ, ಮಾತ್ರವಲ್ಲದೆ ಅವಾಚ್ಯ ಅರ್ಥ ಹೊಮ್ಮಿಸುವ ಪದದ ಬಳಕೆಯನ್ನೂ ಮಾಡಿದ್ದಾರೆ.
ಶಿವಣ್ಣನ ಚುನಾವಣಾ ಪ್ರಚಾರದ ಬಗ್ಗೆ ಪೋಸ್ಟ್ ಮಾಡಿರುವ ಪ್ರಶಾಂತ್ ಸಂಬರ್ಗಿ, ”ಶಿವಣ್ಣ ಯಾವತ್ತೂ ಸ್ಕ್ರಿಪ್ಟ್ ಕೇಳೋದೇ ಇಲ್ಲ ಪೇಮೆಂಟ್ ತುಂಬಾನೇ ಮುಖ್ಯ ಒಪ್ಪಿಕೊಂಡ ಸಿನಿಮಾ ಮಾಡ್ತಾರೆ. ತುಂಬಾ ಎಮೋಷನಲ್ ಜೀವಿ ನಮ್ಮ ಶಿವಣ್ಣ. ಸಿನಿಮಾ ಫ್ಲಾಪ್ ಆದ್ರೂ ಅವರು ಕೇರ್ ಮಾಡಲ್ಲ ಮತ್ತೆ ಪೇಮೆಂಟ್ ತೊಗೊಂಡು ಇನ್ನೊಂದು ಫಿಲಂ ಸೈನ್ ಮಾಡ್ತಾರೆ. ಅದೇ ಫಾರ್ಮುಲಾ ರಾಜಕೀಯದಲ್ಲೂ ಅನುಸರಿಸಿದ್ದಾರೆ. ಕ್ಯಾಂಡಿಡೇಟ್ ಗೆದ್ರೆ ಏನು ಸೋತ್ರೆ ಏನು, ಎಲ್ಲಾ ಒಂದೇ. ಏನೋ ಹೇಳ್ತಾರಲ್ಲ ಗೆದ್ರೆ ಬೆಟ್ಟ. ಇಲ್ಲ ಅಂದ್ರೆ.. ಬಂತಾ ಪ್ಯಾಕೆಟ್? ಸರಿ ಆಲ್ರೈಟ್ ಮುಂದೆ ಹೋಗೋಣ” ಎಂಬ ಪೋಸ್ಟ್ ಅನ್ನು ಪ್ರಶಾಂತ್ ಸಂಬರ್ಗಿ ಹಂಚಿಕೊಂಡಿದ್ದಾರೆ.
-masthmagaa.com
Contact Us for Advertisement