ವರಸೆ ಬದಲಾಯಿಸಿದ ಪ್ರಶಾಂತ್‌ ಸಂಬರ್ಗಿ : ಶಿವಣ್ಣನ ಅಭಿಮಾನಿಗಳಿಗೆ ಕ್ಷಮೆ ಯಾಚನೆ !

masthmagaa.com:

ಬಿಗ್‌ ಬಾಸ್‌ ಖ್ಯಾತಿಯ ಪ್ರಶಾಂತ್‌ ಸಂಬರ್ಗಿ ಅವರು ಶಿವರಾಜ್‌ಕುಮಾರ್‌ ಅವರ ಬಗ್ಗೆ ವ್ಯಂಗ್ಯವಾಗಿ ಮಾತನಾಡಿದ್ದರು. ಶಿವಣ್ಣ ಅವರು ಕಾಂಗ್ರೆಸ್‌ ಪರ ಪ್ರಚಾರ ಕುರಿತು ಪೋಸ್ಟ್‌ ಹಾಕಿಕೊಂಡು ”ಶಿವಣ್ಣ ಯಾವತ್ತೂ ಸ್ಕ್ರಿಪ್ಟ್ ಕೇಳೋದೇ ಇಲ್ಲ ಪೇಮೆಂಟ್ ತುಂಬಾನೇ ಮುಖ್ಯ ಒಪ್ಪಿಕೊಂಡ ಸಿನಿಮಾ ಮಾಡ್ತಾರೆ. ತುಂಬಾ ಎಮೋಷನಲ್ ಜೀವಿ ನಮ್ಮ ಶಿವಣ್ಣ. ಸಿನಿಮಾ ಫ್ಲಾಪ್ ಆದ್ರೂ ಅವರು ಕೇರ್‌ ಮಾಡಲ್ಲ ಮತ್ತೆ ಪೇಮೆಂಟ್ ತೊಗೊಂಡು ಇನ್ನೊಂದು ಫಿಲಂ ಸೈನ್ ಮಾಡ್ತಾರೆ. ಅದೇ ಫಾರ್ಮುಲಾ ರಾಜಕೀಯದಲ್ಲೂ ಅನುಸರಿಸಿದ್ದಾರೆ. ಕ್ಯಾಂಡಿಡೇಟ್ ಗೆದ್ರೆ ಏನು ಸೋತ್ರೆ ಏನು, ಎಲ್ಲಾ ಒಂದೇ. ಏನೋ ಹೇಳ್ತಾರಲ್ಲ ಗೆದ್ರೆ ಬೆಟ್ಟ. ಇಲ್ಲ ಅಂದ್ರೆ.. ಬಂತಾ ಪ್ಯಾಕೆಟ್? ಸರಿ ಆಲ್​ರೈಟ್ ಮುಂದೆ ಹೋಗೋಣ” ಅಂತ ಬರೆದುಕೊಂಡಿದ್ದರು. ಇದೀಗ ಈ ಪೋಸ್ಟ್‌ನ್ನು ಹಿಂಪಡೆಯುತ್ತದ್ದೇನೆ ಅಂತ ಮತ್ತೊಂದು ಪೋಸ್ಟ ಹಾಕಿಕೊಂಡಿದ್ದಾರೆ.

ಪ್ರಶಾಂತ್‌ ಸಂಬರ್ಗಿಯ ಪೋಸ್ಟ್‌ಗೆ ಸಾಕಷ್ಟು ವಿರೋಧಗಳು ವ್ಯಕ್ತವಾಗಿದ್ದವು. ಪ್ರಶಾಂತ್ ಸಂಬರ್ಗಿ ಹೇಳಿಕೆಗೆ ಶಿವರಾಜ್​ಕುಮಾರ್ ಅಭಿಮಾನಿಗಳು ಸಿಟ್ಟಿಗೆದ್ದಿದ್ದರು. ಪ್ರಶಾಂತ್ ಸಂಬರ್ಗಿ ಕ್ಷಮೆ ಕೇಳಬೇಕು ಎಂದು ಪಟ್ಟು ಹಿಡಿದಿದ್ದರು. ಶಿವರಾಜ್​ಕುಮಾರ್ ಕೂಡ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದರು. ‘ನನಗೆ ಹಣ ಕಡಿಮೆ ಆಗಿದೆಯಾ? ನಾನು ಮನಸ್ಸಿನ ಮಾತು ಕೇಳಿ ಬಂದಿದ್ದೇನೆ. ಅವರು ಆ ರೀತಿ ಮಾತನಾಡೋದು ಸರಿ ಅಲ್ಲ. ಮಾತನ್ನು ಅವರು ಹಿಂಪಡೆಯಲಿ’ ಎಂದಿದ್ದರು. ಈ ಬೆನ್ನಲ್ಲೇ ಪ್ರಶಾಂತ್‌ ಸಂಬರ್ಗಿ ತಾವು ಆಡಿದ ಮಾತನ್ನು ಹಿಂದಕ್ಕೆ ಪಡೆದಿದ್ದಾರೆ.

ಈ ವಿಚಾರವಾಗಿ ಕ್ಷಮೆ ಕೇಳಿದ ಪ್ರಶಾಂತ್‌ ಸಂಬರ್ಗಿ ʻʻಶಿವಣ್ಣ ಮತ್ತೆ ಇನ್ನೊಬ್ಬ ನಮ್ಮ ಆಪ್ತ ಮಿತ್ರ ನೊಂದಿಗೆ ಇದೀಗ ತಾನೇ ಮಾತನಾಡಿದೆ. ಶಿವಣ್ಣ ಅವರಿಗೆ ಎಲ್ಲಾ ರಾಜಕೀಯ ಪಕ್ಷಗಳಲ್ಲಿ ಸ್ನೇಹಿತರನ್ನು ಹೊಂದಿದ್ದಾರೆ. ಶಿವಣ್ಣ ಅವರ ತಂದೆಯ ಬಯಕೆಯಂತೆ ಅವರು ರಾಜಕೀಯದಿಂದ ದೂರವಾಗಿದ್ದಾರೆ. ನಾನು ಅವರ ಬಗ್ಗೆ ಬರೆದಿರುವ ನನ್ನ ಪೋಸ್ಟ್ ಅನ್ನು ಹಿಂದಕ್ಕೆ ತೆಗೆದುಕೊಳ್ಳುತ್ತೇನೆ ಮತ್ತು ಶಿವಣ್ಣ ಮತ್ತು ಅವರ ಅಭಿಮಾನಿಗಳಿಗೆ ಕರ್ನಾಟಕದಾದ್ಯಂತ ನೋಯಿಸಬಾರದು ಎಂದು ನಾನು ಬಯಸುತ್ತೇನೆ.ʼʼ ಎಂದು ಸೋಷಿಯಲ್‌ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

-masthmagaa.com

Contact Us for Advertisement

Leave a Reply