masthmagaa.com:
ಅಕ್ರಮವಾಗಿ ಮರ ಕಡಿದ ಪ್ರಕರಣದಲ್ಲಿ ಸಂಸದ ಪ್ರತಾಪ್ ಸಿಂಹ ಸಹೋದರ ವಿಕ್ರಂ ಸಿಂಹ ಪರವಾಗಿ ಮಾಜಿ ಸಿಎಂ ಕುಮಾರಸ್ವಾಮಿ ಬ್ಯಾಟ್ ಬೀಸಿದ್ರು. ಇದೀಗ ಪ್ರತಾಪ್ ಸಿಂಹ HDK ಅವ್ರನ್ನ ಭೇಟಿಯಾಗಿ ಧನ್ಯವಾದ ತಿಳಿಸಿದ್ದಾರೆ. ಅಲ್ಲದೆ ಈ ಬಗ್ಗೆ ಫೋಟೋಗಳನ್ನ ಹಂಚಿಕೊಂಡು ʻಕಷ್ಟಕಾಲದಲ್ಲಿ ಸತ್ಯ ಸಂಗತಿ ಜನರ ಮುಂದಿಟ್ಟು ಬೆನ್ನಿಗೆ ನಿಂತಿದ್ದಕ್ಕೆ ಧನ್ಯವಾದʼ ಅಂತ ಪೋಸ್ಟ್ ಹಾಕಿದ್ದಾರೆ. ಇನ್ನೊಂದು ಕಡೆ ಮುಂಬರೋ ಲೋಕಸಭಾ ಚುನಾವಣೆಯಲ್ಲಿ ಮೈಸೂರು-ಕೊಡಗು ಕ್ಷೇತ್ರದಿಂದ ನನ್ನ ವಿರುದ್ದ ಸಿಎಂ ಪುತ್ರ ಯತೀಂದ್ರ ಸಿದ್ದರಾಮಯ್ಯ ಸ್ಪರ್ಧಿಸಿದ್ರೆ ಒಳ್ಳೇದು ಅಂತ ಪ್ರತಾಪ್ ಸಿಂಹ ಹೇಳಿಕೆ ನೀಡಿದ್ದಾರೆ.
-masthmagaa.com
Contact Us for Advertisement