masthmagaa.com:
ದೇಶದಲ್ಲಿ ಜಾತ್ಯತೀತ ಪಕ್ಷಗಳು ಒಗ್ಗೂಡಿದರೆ ಬಿಜೆಪಿ ಹಾಗೂ ಪ್ರಧಾನಿ ನರೇಂದ್ರ ಮೋದಿಯವರಿಗೆ ಸೋಲು ಖಚಿತ ಅಂತ ಮಾಜಿ ಸಂಸದ ಎಂ.ವೀರಪ್ಪ ಮೊಯಿಲಿ ಭವಿಷ್ಯ ನುಡಿದಿದ್ದಾರೆ. ಜಾತ್ಯತೀತ ನಿಲುವು ಹೊಂದಿರುವ ಸುಮಾರು 19 ವಿರೋಧ ಪಕ್ಷಗಳು ಬಿಹಾರದ ಪಾಟ್ನದಲ್ಲಿ ಇತ್ತೀಚೆಗೆ ಸಭೆ ನಡೆಸಿವೆ. ಜಾತ್ಯತೀತ ಪಕ್ಷಗಳು ಒಂದಾದರೆ 2024ರ ಲೋಕಸಭೆ ಚುನಾವಣೆಯಲ್ಲಿ ನರೇಂದ್ರ ಮೋದಿ ಸೋಲು ಖಚಿತ ಅಂತ ಮೊಯಿಲಿ ಹೇಳಿದ್ದಾರೆ. ಇದೇ ವೇಳೆ ಬಿಜೆಪಿಗರು ಕೆಟ್ಟ ಬುದ್ದಿಯನ್ನು ಈಗಲೂ ಅನುಸರಿಸುತ್ತಿದ್ದಾರೆ. ಜೊತಗೆ ಸಂವಿಧಾನಕ್ಕೆ ವಿರುದ್ಧವಾಗಿ ವರ್ತಿಸುತ್ತಿದ್ದಾರೆ. ಕರ್ನಾಟಕ ಮಾತ್ರವಲ್ಲದೆ ಗೋವಾ, ಮಣಿಪುರ ಸೇರಿದಂತೆ 8 ರಾಜ್ಯಗಳಲ್ಲಿ ಆಪರೇಷನ್ ಕಮಲದ ಮೂಲಕ ಅಧಿಕಾರ ಹಿಡಿದಿದ್ದಾರೆ ಅಂತ ಆಕ್ರೋಶ ವ್ಯಕ್ತಪಡಿಸಿದ್ದಾರೆ.
-masthmagaa.com
Contact Us for Advertisement