masthmagaa.com:
ನೂತನ ಬೆಂಗಳೂರು ಮೈಸೂರು ದಶಪಥ ರಸ್ತೆಯಲ್ಲಿ ಟೋಲ್ ದರ ಹೆಚ್ಚಳವನ್ನ ಖಂಡಿಸಿ ಪ್ರತಿಭಟನೆ ನಡೆಸಲಾಗಿದೆ. ಕನ್ನಡಪರ ಸಂಘಟನೆಯ ಕಾರ್ಯಕರ್ತರು ಅನ್ಕೊಂಡು ಈ ಪ್ರತಿಭಟನೆ ನಡೆಸಿದ್ದಾರೆ. ಬೆಂಗಳೂರು ದಕ್ಷಿಣ ತಾಲೂಕಿನ ಕಣಮಿಣಿಕೆ ಟೋಲ್ ಪ್ಲಾಜಾ ಬಳಿ ಹೆದ್ದಾರಿ ತಡೆದು ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಕಾರು, ವ್ಯಾನ್, ಜೀಪ್ ಏಕಮುಖ ಸಂಚಾರಕ್ಕೆ 135 ರೂಪಾಯಿಂದ 165 ರೂಗೆ ಏರಿಕೆಯಾಗಿದೆ. ಲಘು ವಾಹನಗಳು, ಮಿನಿ ಬಸ್ಗಳ ಏಕಮುಖ ಸಂಚಾರಕ್ಕೆ 220 ರೂ ರಿಂದ 270 ರೂಗೆ ಏರಿಕೆಯಾಗಿದ್ದು ಟ್ರಕ್, ಬಸ್, 2 ಆ್ಯಕ್ಸೆಲ್ ವಾಹನ ಏಕಮುಖ ಸಂಚಾರಕ್ಕೆ 460 ರಿಂದ 565 ರೂಪಾಯಿಗೆ ಹೆಚ್ಚಳ ಮಾಡಲಾಗಿದೆ.
-masthmagaa.com
Contact Us for Advertisement