ಗಲಾಟೆ ಮಾಡಿದ್ರೆ ಕಂಬಿ ಎಣಿಸುತ್ತೀಯಾ ಹುಷಾರ್‌ ಅಂತ ಚಕ್ರವರ್ತಿ ಸೂಲಿಬೆಲೆಗೆ ಎಚ್ಚರಿಕೆ ನೀಡಿದ ಎಂ.ಬಿ ಪಾಟೀಲ್‌!

masthmagaa.com:

ಮೈಸೂರಿನಲ್ಲಿ ವಿ.ಡಿ ಸಾವರ್ಕರ್ ಅವರ 140ನೇ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿರುವ ಚಕ್ರವರ್ತಿ ಸೂಲಿಬೆಲೆ ಅವ್ರು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಇಂದಿನ ಕಾರ್ಯಕ್ರಮ ಇಲ್ಲ, ರದ್ದಾಗಲಿದೆ ಅಂತ ನಾವು ಅನ್ಕೊಂಡಿದ್ವಿ. ಸಾವರ್ಕರ್ ಕಾರ್ಯಕ್ರಮದ ಬಗ್ಗೆ ಸರ್ಕಾರಕ್ಕೆ ಭಯ ಇರಬಹುದು. ಅಧಿಕಾರಕ್ಕೆ ಬಂದು ಇನ್ನು ಒಂದು ವಾರವಾಗಿಲ್ಲ ಅಷ್ಟರಲ್ಲಿ ಸಾವರ್ಕರ್ ಜಯಂತಿ ರದ್ದು ಮಾಡೋಕೆ ಹೊರಟಿದ್ದಾರೆ. ಇದು ಹಿಟ್ಲರ್ ಸರ್ಕಾರ ಅಂತ ಕಾಂಗ್ರೆಸ್‌ ವಿರುದ್ಧ ಸೂಲಿಬೆಲೆ ವಾಗ್ದಾಳಿ ನಡೆಸಿದ್ದಾರೆ. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಕೈಗಾರಿಕಾ ಸಚಿವ ಎಂಬಿ ಪಾಟೀಲ್, ಗಲಾಟೆ ಮಾಡಿದ್ರೆ ಜೈಲು ಪಾಲಾಗ್ತೀರಿ ಹುಷಾರ್ ಅಂತ ಎಚ್ಚರಿಕೆ ನೀಡಿದ್ದಾರೆ. ಈ ಹಿಂದೆ ಹಿಜಾಬ್ , ಹಲಾಲ್ ಅಂತ ಗಲಾಟೆ ಮಾಡಿದ್ದೀರಿ. ಈಗ ಅದಕ್ಕೆಲ್ಲ ಬ್ರೇಕ್ ಹಾಕುತ್ತೇವೆ. ಇನ್ನು ಮುಂದೆ ಅದೆಲ್ಲ ನಡೆಯಲ್ಲ. ಏನಾದರೂ ಗಲಾಟೆ ಮಾಡಿದರೆ ಜೈಲು ಕಂಬಿ ಎಣಿಸ್ತೀರಾ ಹುಷಾರ್ ಅಂತ ತಿರುಗೇಟು ನೀಡಿದ್ದಾರೆ. ಜೊತೆಗೆ ಬಿಜೆಪಿ ಸರ್ಕಾರ ಆಡಳಿತಾವಧಿಯಲ್ಲಿ ಜನರ ಬದುಕು ಕಟ್ಟಿಕೊಡುವ ಬದಲಾಗಿ ಹಿಜಾಬ್, ಹಲಾಲ್, ಉರಿಗೌಡ, ನಂಜೇಗೌಡ ಅಂತೆಲ್ಲಾ ಸಮಾಜದಲ್ಲಿ ಸಂಘರ್ಷದಿಂದ ಕೂಡಿದ ವಾತಾವರಣ ಸೃಷ್ಟಿಸುವ ಕೆಲಸ ಮಾಡಿದೆ ಅಂತ ವಾಗ್ದಾಳಿ ನಡೆಸಿದ್ದಾರೆ.

-masthmagaa.com

Contact Us for Advertisement

Leave a Reply