masthmagaa.com:
ಕಾಂಗ್ರೆಸ್ ಪಕ್ಷಕ್ಕೆ ಗುಡ್ಬೈ ಹೇಳಿ ಬಿಜೆಪಿ ಸೇರಿದ ಜ್ಯೋತಿರಾದಿತ್ಯ ಸಿಂಧಿಯಾ ಬಗ್ಗೆ ರಾಹುಲ್ ಗಾಂಧಿ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಪಕ್ಷವನ್ನು ತೊರೆಯೋಕೂ ಮುನ್ನ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿಯನ್ನು ಭೇಟಿಯಾಗಲು ಸಿಂಧಿಯಾ ಪ್ರಯತ್ನಿಸಿದ್ದರು. ಆದರೆ ಭೇಟಿಗೆ ವರಿಷ್ಠರು ಅವಕಾಶವೇ ಕೊಡಲಿಲ್ಲ ಅನ್ನೋ ಮಾತುಗಳು ಹರಿದಾಡಿತ್ತು. ಇದನ್ನು ಅಲ್ಲಗೆಳೆದಿರುವ ರಾಹುಲ್ ಗಾಂಧಿ, ‘ನಮ್ಮ ಮನೆಗೆ ಯಾವಾಗ ಬೇಕಾದ್ರೂ ಬರಬಹುದಾಗಿದ್ದ ಏಕೈಕ ವ್ಯಕ್ತಿ ಆತ’ ಎಂದಿದ್ದಾರೆ.
ಕಾಂಗ್ರೆಸ್ನಲ್ಲಿದ್ದಾಗ ರಾಹುಲ್ ಗಾಂಧಿ ಜೊತೆಗೆ ಜ್ಯೋತಿರಾದಿತ್ಯ ಸಿಂಧಿಯಾ ಉತ್ತಮ ಒಡನಾಟ ಹೊಂದಿದ್ದರು. ಹೀಗಾಗಿಯೇ ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾಗುವಾಗ ಸಿಂಧಿಯಾಗೆ ಒಳ್ಳೆಯ ಸ್ಥಾನಮಾನ ಸಿಗುತ್ತೆ ಎನ್ನಲಾಗಿತ್ತು. ಆದ್ರೆ ಸೋನಿಯಾ ಗಾಂಧಿಗೆ ನಿಷ್ಠರಾಗಿದ್ದ ಕಮಲ್ನಾಥ್ಗೆ ಸಿಎಂ ಕುರ್ಚಿ ಸಿಕ್ಕಿತ್ತು. ಇದರಿಂದ ಅಸಮಾಧಾನಗೊಂಡಿದ್ದ ಸಿಂಧಿಯಾ ಸದ್ಯ ಬಿಜೆಪಿ ಮನೆ ಸೇರಿದ್ದಾರೆ. ಅವರನ್ನು ರಾಜ್ಯಸಭೆಗೆ ಕಳಿಸಿ ಕೇಂದ್ರ ಸಚಿವರನ್ನಾಗಿ ಮಾಡುವ ಯೋಜನೆ ಬಿಜೆಪಿಯದ್ದು ಎನ್ನಲಾಗ್ತಿದೆ.
-masthmagaa.com
Contact Us for Advertisement