masthmagaa.com:

ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಮಳೆ ಮುಂದುವರಿಯುವ ಸಾಧ್ಯತೆ ಇದೆ. ರಾಜ್ಯದ ಕರಾವಳಿ, ಮಲೆನಾಡು ಮತ್ತು ಅದಕ್ಕೆ ಹೊಂದಿಕೊಂಡಿರುವ ಒಳನಾಡು ಪ್ರದೇಶಗಳಲ್ಲಿ ವ್ಯಾಪಕ ಮಳೆಯಾಗಲಿದೆ ಅಂತ ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ (KSNDMC) ಮುನ್ಸೂಚನೆ ನೀಡಿದೆ. KSNDMC ಬಿಡುಗಡೆ ಮಾಡಿರುವ ಚಿತ್ರದ ಪ್ರಕಾರ ಚಿಕ್ಕಮಗಳೂರು, ಹಾಸನ, ಮೈಸೂರು, ಮಂಡ್ಯ, ಕೊಡಗು, ದಕ್ಷಿಣಕನ್ನಡ, ಉಡುಪಿ, ಉತ್ತರಕನ್ನಡ, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಹಾವೇರಿ, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಜಿಲ್ಲೆಗಳಲ್ಲಿ ಸಣ್ಣ ಮತ್ತು ಮಧ್ಯಮ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆ ಇದೆ.

-masthmagaa.com

Contact Us for Advertisement

Leave a Reply