masthmagaa.com:
ರಾಜ್ಯದಲ್ಲಿ ಮುಂಗಾರು ಮಳೆ ಈ ವರ್ಷ ಕೈಕೊಡೋ ಲಕ್ಷಣಗಳು ಕಾಣ್ತಿವೆ. ರಾಜ್ಯದ ಬಹುತೇಕ ಜಲಾಶಯಗಳು ಮಳೆ ಕೊರತೆಯಿಂದಾಗಿ ಬತ್ತಿ ಹೋಗ್ತಿವೆ. ಆದ್ರೆ ಅಲ್ಲಲ್ಲಿ ಮಾತ್ರ ವರುಣ ಕೃಪೆ ತೋರಿದ್ದು ಹಲವೆಡೆ ಇವತ್ತು ಗುಡುಗು ಸಹಿತ ಭಾರಿ ಮಳೆಯಾಗಿದೆ. ಇನ್ನು ಮುಂದಿನ 2 ದಿನಗಳಲ್ಲಿ ಬೆಂಗಳೂರಿನಲ್ಲಿ ಭಾರಿ ಮಳೆಯಾಗೋ ಸಾಧ್ಯತೆಯಿದೆ ಅಂತ ಹವಾಮಾನ ಇಲಾಖೆ ಸೂಚನೆ ನೀಡಿದೆ. ಇನ್ನೊಂದ್ ಕಡೆ ಮಹಾರಾಷ್ಟ್ರದ ಕೋಯ್ನಾ ಅಣೆಕಟ್ಟು ಪ್ರದೇಶದಲ್ಲಿ ಒಳ್ಳೆ ಮಳೆ ಆದ ಕಾರಣ ಕರ್ನಾಟಕ ಹಾಗೂ ಮಹಾರಾಷ್ಟ್ರ ಗಡಿಯಲ್ಲಿರೋ ರಾಜಾಪುರ ಬ್ಯಾರೇಜ್ನಿಂದ ಕರ್ನಾಟಕಕ್ಕೆ ಮತ್ತೆ ನೀರು ಬಿಡುಗಡೆ ಮಾಡಲಾಗಿದೆ. ಮೊನ್ನೆಯಷ್ಟೇ ಕೃಷ್ಣಾ ನದಿಗೆ 1,500 ಕ್ಯೂಸೆಕ್ ನೀರು ಬಿಡುಗಡೆ ಮಾಡಿದ್ದ ಮಹಾರಾಷ್ಟ್ರ ಸರ್ಕಾರ ಮತ್ತೆ ಇವತ್ತು 4,200 ಕ್ಯೂಸೆಕ್ ನೀರನ್ನ ರಿಲೀಸ್ ಮಾಡಿದೆ.
-masthmagaa.com
Contact Us for Advertisement