ನಿವೃತ್ತಿ ಮಾತಾಡಿದ ಡಿಕೆ ಸುರೇಶ್‌! ಯಾಕೆ?

masthmagaa.com:

ವಿಧಾನಸಭೆ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವಿನ ಹುಮ್ಮಸ್ಸಿನಲ್ಲಿರುವ ಕಾಂಗ್ರೆಸ್​ ಮುಂದಿನ ವರ್ಷ ಲೋಕಸಭೆ ಚುನಾವಣೆಗೆ ಭರ್ಜರಿ ತಯಾರಿ ನಡೆಸಿದೆ. ರಾಜ್ಯದಲ್ಲಿ ಒಟ್ಟು 28 ಕ್ಷೇತ್ರಗಳಲ್ಲಿ ಕನಿಷ್ಠ 20 ಸ್ಥಾನಗಳನ್ನು ಗೆಲ್ಲಲು ಕಾಂಗ್ರೆಸ್​ ಪಣತೊಟ್ಟಿದೆ. ಆದ್ರೆ, ಇದರ ಮಧ್ಯೆ 2019ರ ಲೋಕಸಭೆ ಚುನಾವಣೆಯ ರಾಜ್ಯದ ಏಕಕೈಕ ಕಾಂಗ್ರೆಸ್ ಸಂಸದ ಡಿಕೆ ಸುರೇಶ್ ರಾಜಕೀಯದ ಬಗ್ಗೆ​ ವೈರಾಗ್ಯದ ಮಾತುಗಳನ್ನಾಡುತ್ತಿದ್ದಾರೆ. ಅಲ್ಲದೇ ಇದೀಗ ರಾಜಕಾರಣದಿಂದ ಹಿಂದೆ ಸರಿಯುವ ಮಾತುಳನ್ನಾಡಿದ್ದು, ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ ಮೂಡಿಸಿದೆ. ರಾಜಕಾರಣದಲ್ಲಿ ನೆಮ್ಮದಿ ಎನ್ನುವುದೇ ಇಲ್ಲ. ಜೊತೆಗೆ ಇರುವವರ ಬಳಿಯೂ ನೆಮ್ಮದಿ ಇಲ್ಲ. ರಾಜಕಾರಣ ಸಾಕಾಗಿದೆ. ಹೀಗಾಗಿ ರಾಜಕಾರಣದಿಂದ ದೂರ ಉಳಿಯುತ್ತೇನೆ ಅಂತ ಮತ್ತೊಮ್ಮೆ ಪುನರುಚ್ಚರಿಸಿದ್ದಾರೆ.

-masthmagaa.com

Contact Us for Advertisement

Leave a Reply