masthmagaa.com:
ವಿಧಾನಸಭೆ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವಿನ ಹುಮ್ಮಸ್ಸಿನಲ್ಲಿರುವ ಕಾಂಗ್ರೆಸ್ ಮುಂದಿನ ವರ್ಷ ಲೋಕಸಭೆ ಚುನಾವಣೆಗೆ ಭರ್ಜರಿ ತಯಾರಿ ನಡೆಸಿದೆ. ರಾಜ್ಯದಲ್ಲಿ ಒಟ್ಟು 28 ಕ್ಷೇತ್ರಗಳಲ್ಲಿ ಕನಿಷ್ಠ 20 ಸ್ಥಾನಗಳನ್ನು ಗೆಲ್ಲಲು ಕಾಂಗ್ರೆಸ್ ಪಣತೊಟ್ಟಿದೆ. ಆದ್ರೆ, ಇದರ ಮಧ್ಯೆ 2019ರ ಲೋಕಸಭೆ ಚುನಾವಣೆಯ ರಾಜ್ಯದ ಏಕಕೈಕ ಕಾಂಗ್ರೆಸ್ ಸಂಸದ ಡಿಕೆ ಸುರೇಶ್ ರಾಜಕೀಯದ ಬಗ್ಗೆ ವೈರಾಗ್ಯದ ಮಾತುಗಳನ್ನಾಡುತ್ತಿದ್ದಾರೆ. ಅಲ್ಲದೇ ಇದೀಗ ರಾಜಕಾರಣದಿಂದ ಹಿಂದೆ ಸರಿಯುವ ಮಾತುಳನ್ನಾಡಿದ್ದು, ರಾಜ್ಯ ಕಾಂಗ್ರೆಸ್ನಲ್ಲಿ ಸಂಚಲನ ಮೂಡಿಸಿದೆ. ರಾಜಕಾರಣದಲ್ಲಿ ನೆಮ್ಮದಿ ಎನ್ನುವುದೇ ಇಲ್ಲ. ಜೊತೆಗೆ ಇರುವವರ ಬಳಿಯೂ ನೆಮ್ಮದಿ ಇಲ್ಲ. ರಾಜಕಾರಣ ಸಾಕಾಗಿದೆ. ಹೀಗಾಗಿ ರಾಜಕಾರಣದಿಂದ ದೂರ ಉಳಿಯುತ್ತೇನೆ ಅಂತ ಮತ್ತೊಮ್ಮೆ ಪುನರುಚ್ಚರಿಸಿದ್ದಾರೆ.
-masthmagaa.com
Contact Us for Advertisement