ಅನರ್ಹ ಶಾಸಕ ಮಹೇಶ್ ಕುಮಟಳ್ಳಿಯನ್ನು ನಿಂದಿಸಿದ್ದ ಡಿಸಿಎಂ ಲಕ್ಷ್ಮಣ್ ಸವದಿ ಪರ ಸತೀಶ್ ಜಾರಕಿಹೊಳಿ ಬ್ಯಾಟ್ ಬೀಸಿದ್ದಾರೆ. ಸ್ವಕ್ಷೇತ್ರ ಯಮಕನಮರಡಿಯಲ್ಲಿ ಮಾತನಾಡಿದ ಅವರು, ಈಗ ಮಹೇಶ್ ಕುಮಟಳ್ಳಿಗೆ ಹೇಳಿದ್ದಾರೆ. ಮುಂದಿನ ದಿನಗಳಲ್ಲಿ ರಮೇಶ್ ಜಾರಕಿಹೊಳಿ ಸೇರಿದಂತೆ ಎಲ್ಲಾ ಅನರ್ಹ ಶಾಸಕರಿಗೂ ಇದೇ ಮಾತು ಹೇಳ್ತಾರೆ ಅಂತ ಹೇಳಿದ್ದಾರೆ. ಇನ್ನು ಸತೀಶ್ ಜಾರಕಿಹೊಳಿ ಬಗ್ಗೆ ರಮೇಶ್ ಜಾರಕಿಹೊಳಿ ಕೆಂಡಕಾರಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು, ಸತೀಶ್ ಜಾರಕಿಹೊಳಿಗೆ ತಲೆ ಸರಿ ಇಲ್ಲ. ಅವನನ್ನು ಧಾರವಾಡದ ಮೆಂಟಲ್ ಆಸ್ಪತ್ರೆಗೆ ಸೇರಿಸಬೇಕು ಎಂದು ವಾಗ್ದಾಳಿ ನಡೆಸಿದ್ದಾರೆ.
Contact Us for Advertisement2019-09-28