masthmgaa.com:

ಬಾಲಿವುಡ್​ ನಟ ಸುಶಾಂತ್ ಸಿಂಗ್ ರಜಪೂತ್ ಅಕೌಂಟ್​ನಿಂದ ಕೋಟಿ ಕೋಟಿ ಹಣ ವರ್ಗಾವಣೆ ಪ್ರಕರಣದ ವಿಚಾರಣೆಗಾಗಿ ನಟಿ ರಿಹಾ ಚಕ್ರಬರ್ತಿ ಮುಂಬೈನ ಇಡಿ ಕಚೇರಿಗೆ ಆಗಮಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ರಿಹಾಗೆ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿ ಮಾಡಿತ್ತು.

ಆದ್ರೆ ಮುಂದಿನ ವಾರ ಸುಪ್ರೀಂಕೋರ್ಟ್​ನಲ್ಲಿ ವಿಚಾರಣೆ ಇರುವುದರಿಂದ, ಅಲ್ಲಿಯವರೆಗೆ ತನ್ನ ಹೇಳಿಕೆ ಪಡೆಯುವುದನ್ನ ಮುಂದೂಡಬೇಕು ಅಂತ ರಿಹಾ ಮನವಿ ಮಾಡಿಕೊಂಡಿದ್ದರು. ಅದನ್ನು ಜಾರಿ ನಿರ್ದೇಶನಾಲಯ ತಿರಸ್ಕರಿಸಿತ್ತು. ಇದೀಗ ಕೊನೆಗೂ ರಿಹಾ ಚಕ್ರಬರ್ತಿ ಇಡಿ ಅಧಿಕಾರಿಗಳ ಮುಂದೆ ಹಾಜರಾಗಿದ್ದಾರೆ. ಸುಶಾಂತ್ ಸಿಂಗ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ರಿಹಾ ವಿರುದ್ಧ ಸಾಕಷ್ಟು ಆರೋಪ ಕೇಳಿ ಬಂದಿದೆ.

ಇತ್ತೀಚೆಗೆ ಅಜ್ಞಾತ ಸ್ಥಳದಿಂದ ಹೇಳಿಕೆ ಬಿಡುಗಡೆ ಮಾಡಿದ್ದ ರಿಹಾ ಚಕ್ರಬರ್ತಿ ಬಳಿಕ ಎಲ್ಲೂ ಕಾಣಿಸಿಕೊಂಡಿರಲಿಲ್ಲ. ಇದೀಗ ದಿಢೀರ್ ಅಂತ ಮುಂಬೈನ ಇಡಿ ಕಚೇರಿ ಮುಂದೆ ಪ್ರತ್ಯಕ್ಷರಾಗಿದ್ದಾರೆ. ಇತ್ತೀಚಿನ ದಿನಗಳಲ್ಲಿ ರಿಹಾ ಚಕ್ರಬರ್ತಿ ಮುಂಬೈನ ಹಲವೆಡೆ ಆಸ್ತಿಯನ್ನು ಖರೀದಿಸಿದ್ರು ಎನ್ನಲಾಗಿದೆ. ಈ ಬಗ್ಗೆ ಇಡಿ ಅಧಿಕಾರಿಗಳು ಪ್ರಶ್ನಿಸುವ ಸಾಧ್ಯತೆ ಇದೆ.

ಮತ್ತೊಂದುಕಡೆ ಸುಶಾಂತ್ ಅವರ ಮಾಜಿ ಬ್ಯುಸಿನೆಸ್ ಮ್ಯಾನೇಜರ್ ಶ್ರುತಿ ಮೋದಿಗೂ ಇಡಿ ಸಮನ್ಸ್ ನೀಡಿದ್ದು, ಶುಕ್ರವಾರವೇ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ. ಸುಶಾಂತ್ ಅವರ ಸ್ನೇಹಿತ ಸಿದ್ಧಾರ್ಥ್​ ಪಿಠಾಣಿ ಶನಿವಾರ ಇಡಿ ಅಧಿಕಾರಿಗಳ ಮುಂದೆ ಹಾಜರಾಗಬೇಕಿದೆ. ಅತ್ತ ಸಿಬಿಐ ಕೂಡ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದೆ.

-masthmagaa.com

Contact Us for Advertisement

Leave a Reply