masthmagaa.com:
ಹೊಂಬಾಳೆ ಫಿಲ್ಮ್ಸ್ ನ 11 ನೇ ಸಿನಿಮಾ “ಕಾಂತಾರ” ಮುಹೂರ್ತ ನಿನ್ನೆ ಮಧ್ಯಾಹ್ನ ೨.೨೧ ರ ಶುಭಗಳಿಗೆಯಲ್ಲಿ ಕುಂಭಾಶಿಯ ಶ್ರೀ ಆನೆಗುಡ್ಡೆ ವಿನಾಯಕ ದೇವಸ್ಥಾನದಲ್ಲಿ ನೆರವೇರಿತು. ಈ ಚಿತ್ರವನ್ನು ರಿಷಬ್ ಶೆಟ್ಟಿ ಅವರು ನಿರ್ದೇಶಿಸುತ್ತಿದ್ದು, ಅವರೇ ನಾಯಕನ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ. ರಿಷಬ್ ಅವರಿಗೆ ಜೋಡಿಯಾಗಿ ಸಪ್ತಮಿ ಗೌಡ ನಟಿಸುತ್ತಿದ್ದಾರೆ. ಅಚ್ಯುತಕುಮಾರ್, ಕಿಶೋರ್ ಕುಮಾರ್ ಹಾಗೂ ಪ್ರಮೋದ್ ಶೆಟ್ಟಿ ಮುಖ್ಯ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.
“ಕಾಂತಾರ” ಚಿತ್ರವನ್ನು ಹೊಂಬಾಳೆ ಫಿಲ್ಮ್ಸ್ ಸಂಸ್ಥೆಯಡಿಯಲ್ಲಿ ವಿಜಯ್ ಕಿರಗಂದೂರ್ ಅವರು ನಿರ್ಮಿಸುತ್ತಿದ್ದಾರೆ. ಅವರ ಸಹೋದರ ಮಂಜುನಾಥ್ ಮೊದಲ ಸನ್ನಿವೇಶಕ್ಕೆ ಆರಂಭಫಲಕ ತೋರಿದರು. ಕುಂದಾಪುರದ uva ಗ್ರೂಪ್ಸ್ ನ ಛೇರ್ಮನ್ ಉದಯ್ ಶೆಟ್ಟಿ ಕ್ಯಾಮೆರಾ ಚಾಲನೆ ಮಾಡಿದರು.
ಅಜನೀಶ್ ಲೋಕನಾಥ್ ಸಂಗೀತ ನಿರ್ದೇಶನ, ಅರವಿಂದ್ ಕಶ್ಯಪ್ ಅವರ ಛಾಯಾಗ್ರಹಣವಿದ್ದು, ಚಿತ್ರದ ಪ್ರಚಾರ ನಿರ್ವಹಣೆ KRG ಕನೆಕ್ಟ್ಸ್ ವಹಿಸಿಕೊಂಡಿದೆ. ನಾಳೆಯಿಂದ ಕೆರಾಡಿ ಮತ್ತು ಹೆಮ್ಮಾಡಿ ಸುತ್ತಮುತ್ತ ಚಿತ್ರೀಕರಣ ನಡೆಯಲಿದೆ. ಈ ವರ್ಷಾಂತ್ಯದೊಳಗೆ ಚಿತ್ರ ಸಿದ್ದವಾಗಲಿದೆ.
-masthmagaa.com
Contact Us for Advertisement