ವಿಶ್ವಸಂಸ್ಥೆಯಲ್ಲಿ ರಿಷಬ್‌ ಶೆಟ್ಟಿ ಕನ್ನಡ ಸ್ಪೀಚ್‌ :

masthmagaa.com:

ವಿಶ್ವಸಂಸ್ಥೆಯವಾರ್ಷಿಕ ಸಭೆ ಕಳೆದ ಕೆಲವು ದಿನಗಳಿಂದ ನಡೆಯುತ್ತಿದ್ದು, ಈ ಸಭೆಯಲ್ಲಿ ಕನ್ನಡ ಹೆಮ್ಮೆಯ ನಿರ್ದೇಶಕ, ನಟ, ನಿರ್ಮಾಪಕ ರಿಷಬ್ ಶೆಟ್ಟಿ ಕೂಡ ಪಾಲ್ಗೊಳ್ಳಲಿದ್ದಾರೆ. ಪ್ರಚಲಿತ ವಿದ್ಯಾಮಾನಗಳ ಕುರಿತು ಈ ಸಭೆ ನಡೆಯುತಿದ್ದು, ರಿಷಬ್‌ ಶೆಟ್ಟಿ ಈ ಸಭೆಯಲ್ಲಿ ತಮ್ಮ ಭಾಷೆ ಅಂದ್ರೆ ಕನ್ನಡದಲ್ಲೇ ಮಾತನಾಡಿ ಮೆಚ್ಚುಗೆ ಪಡೆದುಕೊಳ್ಳಲಿದ್ದಾರೆ. ನಾಡಿನ ಜನರಷ್ಟೇ ಅಲ್ಲದೇ ದೇಶದ ಸಿನಿಮಾ ಪ್ರೇಕ್ಷಕರಿಂದಲೂ ಮೆಚ್ಚುಗೆ ಪಡೆದ “ಕಾಂತಾರ” ಸಿನಿಮಾ, ಇದೀಗ ವಿಶ್ವಸಂಸ್ಥೆಯ ಸಭೆಯಲ್ಲೂ ಸದ್ದು ಮಾಡಲು ಹೊರಟಿದೆ. ಕಳೆದ ಕೆಲ ದಿನಗಳ ಹಿಂದೆ ಜಾಗತಿಕ ಸಮಸ್ಯೆಗಳ ಕುರಿತು ವಿಶ್ವಸಂಸ್ಥೆ ತನ್ನ ವಾರ್ಷಿಕ ಸಭೆಯಲ್ಲಿ ಚರ್ಚೆನಡೆಸ್ತಾ ಇದೆ. ವಿಶ್ವದ ಹತ್ತು ಹಲವು ದೇಶದ ನಾಯಕರು ಈ ಸಭೆಯಲ್ಲಿ ಪಾಲ್ಗೊಂಡಿದ್ದಾರೆ. ಅದೇ ರೀತಿ ಕರ್ನಾಟಕದ ಕಾಂತಾರ ಚಿತ್ರದ ನಟ, ನಿರ್ದೇಶಕ ರಿಷಬ್‌ ಶೆಟ್ಟಿ ಈ ವಾರ್ಷಿಕ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ರಿಷಬ್ ಶೆಟ್ಟಿ ನಟಿಸಿ ನಿರ್ದೇಶನ ಮಾಡಿರುವ ಕಾಂತಾರ ಸಿನಿಮಾವು ಕಳೆದ ವರ್ಷ ಸೆಪ್ಟೆಂಬರ್ 30 ರಂದು ಬಿಡುಗಡೆ ಆಗಿತ್ತು. ಕಾಂತಾರ ಸಿನಿಮಾದ ಮೂಲಕ ಕಾಡಿನ ಜನರ ಸಮಸ್ಯೆಯ ಕುರಿತು ಅರಿವು ಮೂಡಿಸಿದ್ರು, ಅದರ ಜೊತೆಗೆ ಕಾಡಂಚಿನ ಜನರು ಮತ್ತು ಅರಣ್ಯ ರಕ್ಷಣೆಯಲ್ಲಿ ಅರಣ್ಯ ಇಲಾಖೆಯ ಮಂದಿ ಎದುರಿಸುತ್ತಿರುವ ಸಮಸ್ಯೆಗಳನ್ನ ಪರಿಹರಿಸಲು ಕೋರಿ ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿಯವರಿಗೆ ರಿಷಬ್‌ ಶೆಟ್ಟಿ ಮನವಿ ಸಲ್ಲಿಸಿದ್ರು. ಈ ಮನವಿಗೆ ಸಿಎಂ ಕೂಡ ಸಕಾರಾತ್ಮಕವಾಗಿ ಸ್ಪಂದಿಸಿದ್ರು. “ಕಾಂತಾರ ಸಿನಿಮಾದ ಬಳಿಕ ನಾನು ಹೆಚ್ಚೆಚ್ಚು ಕಾಡು ಮತ್ತು ಕಾಡಂಚಿನ ಪ್ರದೇಶಗಳಲ್ಲಿ ಸುತ್ತಾಡಿ ಅಲ್ಲಿನ ಜನರ ಮತ್ತು ಅರಣ್ಯ ಸಿಬ್ಬಂದಿಗಳ ಜೊತೆ ಮಾತುಕತೆ ನಡೆಸಿ ಅವರ ಸಮಸ್ಯೆಗಳ ಕುರಿತು ಚರ್ಚಿಸಿದ್ದೇನೆ. ಉದಾಹರಣೆಗೆ ಕಾಡ್ಗಿಚ್ಚು ಆಗಿರಬಹುದು ಅಥ್ವಾ ಕೃಷಿಕರು ಅನುಭವಿಸುವಂತ ಕಾಡಾನೆ ದಾಳಿಗಳಾಗಿರಬಹುದು, ಹೀಗೆ ಸುಮಾರು 20 ಅಂಶಗಳನ್ನ ವಿವರವಾದ ಮನವಿಯನ್ನ ಮುಖ್ಯಮಂತ್ರಿಗಳಿಗೆ ಸಲ್ಲಿಸಿದ್ದೇನೆ. ಅವರು ಶೀಘ್ರವಾಗಿ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ, ಅಲ್ಲದೆ ಇಂಥಹಾ ಸಿಎಂ ನಮಗೆ ದೊರಕಿರುವುದು ನಮ್ಮ ಪುಣ್ಯವೆಂದು ಸಹ ಹೇಳಿದ್ರು. ಇವರು ಸಲ್ಲಿಸಿದ್ದ ಮನವಿ ಕುರಿತು ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿತ್ತು.

ಇದೀಗ ರಿಷಬ್‌ ಶೆಟ್ಟಿಯವರು ಜಿನೀವಾದಲ್ಲಿ ನಡೆಯುವ ವಿಶ್ವಸಂಸ್ಥೆಯ ಸಭೆಯಲ್ಲಿ ಪಾಲ್ಗೊಂಡು ಕನ್ನಡಲ್ಲೆ ಮಾತನಾಡಿ, ಮತ್ತೆ ಎಲ್ಲರ ಮೆಚ್ಚುಗೆಗೆ ಕಾರಣವಾಗಲಿದ್ದಾರೆ. ಸಾಮಾನ್ಯವಾಗಿ ಈ ಸಭೆಯಲ್ಲಿ ಹೆಚ್ಚು ಇಂಗ್ಲಿಷ್ ಭಾಷೆಯನ್ನು ಬಳಸುವುದು ಕಾಮನ್‌. ಕನ್ನಡದಲ್ಲಿ ಭಾಷಣ ಮಾಡಿದ ಮೊದಲ ಕನ್ನಡಿಗ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ.
ಕಾಂತಾರ ಸಿನಿಮಾವನ್ನೇ ಆಧಾರವಾಗಿಟ್ಟುಕೊಂಡು, ಕರ್ನಾಟಕ ಸಂಸ್ಕೃತಿ, ದೈವಾರಾಧನೆ, ಕಾಡಿನ ಜನರ ಬದುಕು ಹೀಗೆ ನಾಡಿನ ಭವ್ಯ ಸಂಸ್ಕೃತಿಯ ಕುರಿತು ಮಾತನಾಡಲಿದ್ದಾರಂತೆ. ಜೊತೆಗೆ ಭಾರತೀಯ ಸಿನಿಮಾ ರಂಗ ಬೆಳೆದು ಬಂದ ಬಗೆಯನ್ನೂ ವಿವರಿಸಲಿದ್ದಾರೆ ಎಂದು ಕೇಂದ್ರ ಸರ್ಕಾರ ಟ್ವೀಟ್‌ ಮಾಡಿದೆ. ಅಲ್ಲದೇ CGAPP ನಿರ್ದೇಶಕ ಅನಿಂದ್ಯಾ ಸೇನ್‌ಗುಪ್ತ ಅವರು ರಿಷಬ್‌ ಶೆಟ್ಟಿ ಜೊತೆ ಇರುವ ಫೊಟೊ ಕೂಡ ವೈರಲ್‌ ಅಗತಾ ಇದೆ. ಇದೇ ವೇಳೆ ಕಾಂತಾರ ಸಿನಿಮಾದ ಪ್ರದರ್ಶನವೂ ನಡೆಯಲಿದೆ. ಈ ವಿಷಯ ಈಗಾಗಲೇ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಚರ್ಚೆ ಆಗುತ್ತಿದ್ದು, ರಿಷಬ್ ಮಾತಿಗಾಗಿ ಅಭಿಮಾನಿಗಳು ಕಾಯುತ್ತಿದ್ದಾರೆ.

-masthmagaa.com

Contact Us for Advertisement

Leave a Reply