masthmagaa.com:
ಶಿವಸೇನಾ ಹೆಸರು ಹಾಗೂ ಪಕ್ಷದ ಚಿಹ್ನೆ ವಿಚಾರವಾಗಿ ಉದ್ಧವ್ ಠಾಕ್ರೆ ಬಣ ಶಿಂಧೆ ಪಕ್ಷದ ಮೇಲೆ ಗಂಭೀರ ಆರೋಪ ಮಾಡಿದೆ. ಪಕ್ಷದ ಹೆಸರು ಹಾಗೂ ಚಿಹ್ನೆಗಾಗಿ 2000 ಕೋಟಿ ರೂಪಾಯಿಗೂ ಹೆಚ್ಚಿನ ಹಣಕಾಸು ಅಕ್ರಮ ನಡೆದಿದೆ ಅಂತ ಠಾಕ್ರೆ ಬಣದ ನಾಯಕ ಸಂಜಯ್ ರಾವತ್ ಆರೋಪಿಸಿದ್ದಾರೆ. ʻನನಗೆ ಖಚಿತ ಮಾಹಿತಿ ಸಿಕ್ಕಿದೆ, ನನಗೆ ವಿಶ್ವಾಸವಿದೆ. ಇದು ಶೇ. 100ರಷ್ಟು ಸತ್ಯ ಮಾಹಿತಿʼ ಅಂತ ರಾವತ್ ಸರಣಿ ಟ್ವೀಟ್ ಮಾಡಿದ್ದಾರೆ. ಜೊತೆಗೆ ಇದು ದೇಶದ ಇತಿಹಾಸದಲ್ಲೇ ಹಿಂದೆಂದೂ ಕಂಡುಕೇಳರಿಯದ ಸಂಗತಿ. ಇನ್ನೂ ಕೆಲ ವಿಷಯಗಳನ್ನ ಶೀಘ್ರದಲ್ಲೇ ಬಹಿರಂಗಪಡಿಸಲಾಗುತ್ತೆ ಅಂತ ಹೇಳಿದಾರೆ.
-masthmagaa.com
Contact Us for Advertisement