ನಾಳೆ ಸಾರಿಗೆ ನೌಕರರಿಂದ ಧರಣಿ ಸತ್ಯಾಗ್ರಹ! ಪ್ರಯಾಣಿಕರಿಗೆ ತೊಂದರೆ!

masthmagaa.com:

ವಿವಿಧ ಬೇಡಿಕೆಗಳನ್ನ ಈಡೇರಿಸುವಲ್ಲಿ ವಿಳಂಬ ಮಾಡಲಾಗ್ತಿದೆ ಅಂತ ರಾಜ್ಯ ಸರ್ಕಾರದ ವಿರುದ್ದ ಸಾರಿಗೆ ನೌಕರರು ಮತ್ತೆ ಸಿಡಿದೆದ್ದಿದ್ದಾರೆ. ನಾಳೆಯಿಂದ ಸಾರಿಗೆ ನೌಕರರು ಧರಣಿ ನಡೆಸಲಿದ್ದಾರೆ. ಇದ್ರಿಂದ ನಾಳೆ ಪ್ರಯಾಣಿಕರಿಗೆ ತೊಂದರೆಯಾಗೋ ಸಾಧ್ಯತೆಯಿದೆ. ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳನ್ನ ಈಡೇರಿಸದ ಸರ್ಕಾರದ ವಿರುದ್ಧ 2021ರ ಏಪ್ರಿಲ್ ತಿಂಗಳಲ್ಲಿ 15 ದಿನಗಳ ಕಾಲ ಬೃಹತ್ ಪ್ರತಿಭಟನೆ ನಡೆಸಿದ್ರು. ಇದೀಗ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವಾಗ ಹೋರಾಟಕ್ಕೆ ಇಳಿದಿರುವುದು ಸರ್ಕಾರಕ್ಕೆ ತಲೆನೋವಾಗಿ ಪರಿಣಮಿಸಿದೆ.

-masthmagaa.com

Contact Us for Advertisement

Leave a Reply