masthmagaa.com:
ಉತ್ತರ ಪ್ರದೇಶ ಚುನಾವಣೆ ನಡುವೆ ದೆಹಲಿಯಲ್ಲಿ ನಡೆದ ಕಾರ್ಯಕ್ರಮವೊಂದ್ರಲ್ಲಿ ಸಮಾಜವಾದಿ ಪಕ್ಷದ ನಾಯಕ ಮುಲಾಯಂ ಸಿಂಗ್ ಯಾದವ್ ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗಾವತ್ರನ್ನು ಭೇಟಿಯಾಗಿದ್ದಾರೆ. ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರ ಮೊಮ್ಮಗಳ ಮದುವೆ ರಿಸೆಪ್ಶನ್ನಲ್ಲಿ ಈ ಭೇಟಿ ನಡೆದಿದೆ. 2 ದಿನಗಳ ಹಿಂದಷ್ಟೇ ಉತ್ತರ ಪ್ರದೇಶದಲ್ಲಿ ಸಮಾಜವಾದಿ ಪಕ್ಷದ ಹಲವು ನಾಯಕರ ಮೇಲೆ ಐಟಿ ದಾಳಿ ನಡೆದಿತ್ತು. ಅದ್ರ ಬೆನ್ನಲ್ಲೇ ಈ ಭೇಟಿ ನಡೆದಿರೋದು ರಾಜಕೀಯ ಪಡಸಾಲೆಯಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ಕಾಂಗ್ರೆಸ್ ಅಂತೂ ಸಪಾದಲ್ಲಿ ಸ ಅಂದ್ರೆ ಸಂಘವಾದನಾ ಅಂತ ಪ್ರಶ್ನಿಸಿದೆ.
-masthmagaa.com
Contact Us for Advertisement