masthmagaa.com:
ದೇಶದಲ್ಲಿ ಚುನಾವಣಾ ಕಾವು ಜೋರಾಗಿದ್ದು, ಲೋಕ ಅಖಾಡದಲ್ಲಿ ಸ್ಪರ್ಧೆ ಮಾಡಲು ಪ್ರಮುಖ ರಾಜಕೀಯ ಪಕ್ಷಗಳ ನಾಯಕರ ನಾಮಿನೇಶನ್ ಭರಾಟೆ ಜೋರಾಗಿದೆ. ಅತ್ತ ಉತ್ತರ ಪ್ರದೇಶದಲ್ಲಿ ಸಮಾಜವಾದಿ ಪಾರ್ಟಿ ಮುಖ್ಯಸ್ಥ, ಯುಪಿಯ ಮಾಜಿ ಸಿಎಂ ಅಖಿಲೇಶ್ ಯಾದವ್ ಕನೌಜ್ ಲೋಕಸಭಾ ಕ್ಷೇತ್ರದಲ್ಲಿ ಸಮಾಜವಾದಿ ಪಕ್ಷದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಇನ್ನೊಂದೆಡೆ ಲೋಕಸಭೆ ಜೊತೆ ವಿಧಾನಸಭೆ ಎಲೆಕ್ಷನ್ಗೂ ಸಜ್ಜಾಗ್ತಿರೊ ಆಂಧ್ರ ಪ್ರದೇಶದಲ್ಲಿ ಹಾಲಿ ಸಿಎಂ ಜಗನ್ಮೋಹನ್ ರೆಡ್ಡಿ ತಮ್ಮ YSR ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಪುಲಿವೆಂದುಲಾ ವಿಧಾನಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ್ದಾರೆ. ಅಂದ್ಹಾಗೆ ಮೇ 13ಕ್ಕೆ ಲೋಕಸಭೆ ಎಲೆಕ್ಷನ್ ಜೊತೆ ಆಂಧ್ರದ ವಿಧಾನ ಸಭೆ ಎಲೆಕ್ಷನ್ಗೂ ಏಕಕಾಲಕ್ಕೆ ಮತದಾನ ನಡೆಯಲಿದೆ.
-masthmagaa.com
Contact Us for Advertisement