masthmagaa.com:
ಬಿಗ್ ಬಾಸ್ ಖ್ಯಾತಿಯ ನಟ, ನಿರ್ದೇಶಕ, ಪತ್ರಕರ್ತ ಚಕ್ರವರ್ತಿ ಚಂದ್ರಚೂಡ್ ಅವರ ಹುಟ್ಟುಹಬ್ಬದ ಪ್ರಯುಕ್ತ *ಮೇಲೊಬ್ಬ ಮಾಯಾವಿ* ಚಿತ್ರತಂಡ ಪೋಸ್ಟರ್ ಬಿಡುಗಡೆ ಮಾಡಿದೆ. ಹರಳು ಮಾಫಿಯಾ ಆಧಾರಿತ ಕಥೆಯಿರುವ ಚಿತ್ರದ ಈ ಪೊಸ್ಟರ್ ಸಾಕಷ್ಟು ಕುತೂಹಲ ಕೆರಳಿಸಿದೆ. ಕರಾವಳಿಯಲ್ಲಿ ನಡೆದ ಹರಳು ಮಾಫಿಯಾದ ಸತ್ಯ ಕಥೆ ಆಧಾರಿತ ಈ ಚಿತ್ರದ ರಿಮೇಕ್ ಹಕ್ಕಿಗಾಗಿ ಈಗಾಗಲೇ ಬೇಡಿಕೆ ಬಂದಿದ್ದು, ಶೀಘ್ರದಲ್ಲೇ ಚಿತ್ರತಂಡ ಅದರ ಸಂಪೂರ್ಣ ವಿವರ ನೀಡಲಿದೆ. ಬಿ.ನವೀನ್ ಕೃಷ್ಣ ಕಥೆ, ಬರೆದು ನಿರ್ದೇಶಿಸಿರುವ ಈ ಚಿತ್ರವನ್ನು ಶ್ರೀ ಕಟೀಲ್ ಸಿನಿಮಾಸ್ ಲಾಂಛನದಲ್ಲಿ ಭರತ್ ಹಾಗೂ ತನ್ವಿ ಅಮಿನ್ ಕೊಲ್ಯ ಈ ಚಿತ್ರ ನಿರ್ಮಾಣ ಮಾಡಿದ್ದಾರೆ.
ಚಿತ್ರಕ್ಕೆ ಎಲ್.ಎನ್. ಶಾಸ್ತ್ರಿ ಸಂಗೀತ ನೀಡಿದ್ದು, ಚಕ್ರವರ್ತಿ ಚಂದ್ರಚೂಡ್ ಚಿತ್ರದ ಎಲ್ಲಾ ಹಾಡುಗಳ ಸಾಹಿತ್ಯ ರಚಿಸಿದ್ದಾರೆ. ಕೆ.ಗಿರೀಶ್ ಕುಮಾರ್ ಸಂಕಲನಕಾರರಾಗಿರುವ ʻಮೇಲೊಬ್ಬ ಮಾಯಾವಿʼಗೆ, ದೀಪಿತ್ ಬಿಜೈ ರತ್ನಾಕರ್ ಛಾಯಾಗ್ರಹಣ ಮಾಡಿದ್ದಾರೆ. ಮಣಿಕಾಂತ್ ಕದ್ರಿ ಹಿನ್ನಲೆ ಸಂಗೀತ ನೀಡಿರುವ ಈ ಚಿತ್ರದಲ್ಲಿ ಸಂಚಾರಿ ವಿಜಯ್, ಅನನ್ಯ ಶೆಟ್ಟಿ, ಚಕ್ರವರ್ತಿ ಚಂದ್ರಚೂಡ್, ಕೃಷ್ಣಮೂರ್ತಿ ಕವತ್ತಾರ್, ಎಮ್.ಕೆ.ಮಠ, ಬೆನಕ ನಂಜಪ್ಪ, ವಿಟ್ಲ ಮಂಗೇಶ್ ಭಟ್, ಕಾಸರಗೋಡು ಅಶೋಕ್ ಕುಮಾರ್, ತಾರಾನಾಥ್ ಬೋಳಾರ್, ಮಾಸ್ಟರ್ ಲಕ್ಷ್ಮೀ ಅರ್ಪಣ್, ನವೀನ್ಕುಮಾರ್, ಪವಿತ್ರಾ ಜಯರಾಮ್, ಮುಖೇಶ್, ಡಾ||ಮನೋನ್ಮಣಿ, ಸೇರಿದಂತೆ ಸಾಕಷ್ಟು ರಂಗಭೂಮಿ ನಟರು ಚಿತ್ರದಲ್ಲಿ ನಟಿಸಿದ್ದಾರೆ.
-masthmagaa.com
Contact Us for Advertisement