ಕೊರೋನ ಸಂಕಷ್ಟ ಸಮಯದಲ್ಲಿ ಹುಟ್ಟೂರಿನ ಜನರಿಗೆ ನೆರವಾದ ನಿರ್ದೇಶಕ ಆರ್ ಚಂದ್ರು!!

Masthmagaa.com:
ಎಷ್ಟೋ ಜನ‌ ತಾವು ಹುಟ್ಟಿಬೆಳೆದ ಊರನ್ನು ಬೆಳೆದ ಮೇಲೆ ಮರೆಯುವುದುಂಟು. ಆದರೆ ಕೆಲವರು ಮಾತ್ರ ತಮ್ಮೂರಿನ ಜನರ ಕಷ್ಟಕ್ಕೆ ಸ್ಪಂದಿಸುವ ಗುಣವನ್ನ ಹೊಂದಿರುತ್ತಾರೆ.
ಕನ್ನಡ ಚಲನಚಿತ್ರರಂಗದಲ್ಲಿ ತಮ್ಮದೇ ಹೆಸರು ಮಾಡಿರುವ ನಿರ್ದೇಶಕ ಆರ್ ಚಂದ್ರು ಕೊರೋನ ಸಂಕಷ್ಟ ಸಮಯದಲ್ಲಿ ಉತ್ತಮ ಕಾರ್ಯ ಮಾಡಿದ್ದಾರೆ.
ಚಲನಚಿತ್ರ ಕ್ಷೇತ್ರವೂ ಸೇರಿದಂತೆ ತಾವು ಹುಟ್ಟಿಬೆಳೆದ ಚಿಕ್ಕಬಳ್ಳಾಪುರ ಕೇಶಾವರ ಗ್ರಾಮದ ಸುಮಾರು ಸಾವಿರ ಮನೆಗಳಿಗೆ 25 ಕೆಜಿಯ ಅಕ್ಕಿ ಮೂಟ್ಟೆ ನೀಡಿದ್ದಾರೆ. ಈ ಬಗ್ಗೆ ಸುದ್ದಿಗಾರಾರ ಪ್ರಶ್ನೆಗೆ ಉತ್ತರಿಸಿರುವ ಆರ್ ಚಂದ್ರು, “ನಾನು ರೈತನ ಮಗ. ಕೊರೋನ ಸಂಕಷ್ಟದ ಕಾಲದಲ್ಲಿ ನನ್ನೂರಿನವರಿಗೆ ನೆರವಾಗುವುದು ನನ್ನ ಧರ್ಮ. ಇಂದು ಮತ್ತು ಎಂದೆಂದಿಗೂ ನಾನು ಮಣ್ಣಿನ ಋಣ ತೀರಿಸಲು ಮುಂದಾಗಿರುತ್ತೇನೆ” ಅಂತ ಹೇಳಿದ್ದಾರೆ.
– Masthmagaa.com
Contact Us for Advertisement

Leave a Reply